Featured

ಬೆಂಗಳೂರು: ನಾಪತ್ತೆಯಾಗಿದ್ದ ಪ್ರೇಮಿಗಳ ಶವ ನೈಸ್‌ ರಸ್ತೆ ಬಳಿಯ ಕೆರೆಯಲ್ಲಿ ಪತ್ತೆ – vishwanews24

ಬೆಂಗಳೂರು: ನಾಪತ್ತೆಯಾಗಿದ್ದ ಪ್ರೇಮಿಗಳು ಕೆರೆಗೆ ಹಾರಿ ಆತ್ಮಹತ್ಯೆ

ಬೆಂಗಳೂರು: ಜುಲೈ 1ರಿಂದ ನಾಪತ್ತೆಯಾಗಿದ್ದ ಪ್ರೇಮಿಗಳ ಶವ  ನೈಸ್‌ ರಸ್ತೆ ಬಳಿಯ ಕೆರೆಯಲ್ಲಿ ಪತ್ತೆಯಾಗಿದೆ. ಪ್ರೀತಿಗೆ ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ  ಮಾಡಿಕೊಂಡಿದ್ದಾರೆ.

ಅಂಜನಾಪುರದ ತುಳಸಿಪುರ ಕೆರೆಯಲ್ಲಿ ಶವಗಳು ಪತ್ತೆಯಾಗಿವೆ. ಕಾಲೇಜು ವಿದ್ಯಾರ್ಥಿನಿ ಅಂಜನಾ (20) ಮತ್ತು ಶ್ರೀಕಾಂತ್ (24) ಸಾವನ್ನಪ್ಪಿರುವ ದುರ್ದೈವಿಗಳು. ಬಿಬಿಎ ವಿದ್ಯಾರ್ಥಿಯಾಗಿದ್ದ ಅಂಜನಾ ತಲಘಟ್ಟಪುರ ಸಮೀಪದ ಅಂಜನಾಪುರ ನಿವಾಸಿ. ಬಿಕಾಂ ವ್ಯಾಸಂಗ ಮಾಡುತ್ತಿದ್ದ ಶ್ರೀಕಾಂತ್‌ ಕೋಣನಕುಂಟೆ ನಿವಾಸಿ. ನಾಪತ್ತೆ ಹಿನ್ನೆಲೆಯಲ್ಲಿ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಕಳೆದ ಕೆಲ ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇವರಲ್ಲಿ ಶ್ರೀಕಾಂತ್‌ ವಿವಾಹಿತನಾಗಿದ್ದ. ಆದರೆ ಅಂಜನಾಳನ್ನು ಪ್ರೀತಿಸುತ್ತಿದ್ದ. ಹೀಗಾಗಿ ಇವರಿಬ್ಬರ ಪ್ರೀತಿಗೆ ವಿದ್ಯಾರ್ಥಿನಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ನಂತರ ಇವರಿಬ್ಬರೂ ಜುಲೈ 1ರಂದು ನಾಪತ್ತೆಯಾಗಿದ್ದರು. ಇಬ್ಬರೂ ದಾರದಿಂದ ಕೈ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಟುಂಬಸ್ಥರ ದೂರಿನ ಮೇರೆಗೆ ಎರಡು ಪ್ರತ್ಯೇಕ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಇಬ್ಬರೂ ಸ್ನೇಹಿತರಾಗಿದ್ದು, ಒಟ್ಟಿಗೆ ಓಡಾಡುತ್ತಿದ್ದರು. ಇಬ್ಬರಲ್ಲಿ ಶ್ರೀಕಾಂತ್‌ಗೆ ಮದುವೆಯಾಗಿದೆ. ಮದುವೆ ಆದ ಕಾರಣ ಒಟ್ಟಿಗೆ ಇರಲು ಆಗಲ್ಲ ಅನ್ನೋ ದುಃಖ ಇತ್ತು. ಇಬ್ಬರೂ ಒಟ್ಟಿಗೆ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ತನಿಖೆ ಮುಂದುವರೆದಿದೆʼ ಎಂದು ದಕ್ಷಿಣ ವಿಭಾಗ ಡಿಸಿಪಿ ಲೋಕೆಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ.

ಇಬ್ಬರು ಒಟ್ಟಿಗೆ ಬದುಕಲು ಆಗಲ್ಲ ಎಂದು ಸಾಯೊ‌ ನಿರ್ಧಾರ ಮಾಡಿದ್ದಾರೆ. ಯುವತಿ ಅಂಜನಾ ಸಾವಿಗೆ ಮುನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾಳೆ. ನಮ್ಮ ಸಾವಿಗೆ ಯಾರೂ ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋದಲ್ಲಿ ಹೇಳಿದ್ದಾಳೆ. ಅದನ್ನು ಆಟೋದಲ್ಲಿ ಬಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನ ಬಾಡಿ ಮೇಲೆತ್ತುವಾಗ ಅಂಜನಾ ಮೃತದೇಹ ಕೂಡ ಹೊರಗೆ ಬಂದಿದೆ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆʼ ಎಂದು ಜಗಲಾಸರ್‌ ತಿಳಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

1 hour ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago