ಬೆಂಗಳೂರು: ನಿಂತಿದ್ದ ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ನಿರ್ವಾಹಕ ಸಜೀವ ದಹನವಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಮುತ್ತಯ್ಯ ಸ್ವಾಮಿ (45) ಎಂದು ಗುರುತಿಸಲಾಗಿದೆ. ಬಸ್ ಡಿಪೋ 31ಕ್ಕೆ ಸೇರಿದ್ದಾಗಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ.
ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ನಿಲ್ದಾಣ ದಲ್ಲಿ ಚಾಲಕ ಹಾಗೂ ನಿರ್ವಾಹಕ ಬಸ್ನಲ್ಲಿ ಮಲಗಿದ್ದರು. ಮುತ್ತಯ್ಯ ಸ್ವಾಮಿ ಅವರು ಬಸ್ಸಿನ ಸಿಟ್ನಲ್ಲಿಯೇ ಮಲಗಿದ್ದರು. ಈ ವೇಳೆ ಬಸ್ಸಿಗೆ ದಿಢೀರ್ ಬೆಂಕಿ ಹೊತ್ತಿಕೊಂಡಿದ್ದು, ಮುತ್ತಯ್ಯ ಅವರು ಮಲಗಿದ್ದಲ್ಲೇ ಸಂಪೂರ್ಣ ಸುಟ್ಟು ಕರಕಲಾಗಿದ್ದಾರೆ. ಇತ್ತ ಮುಂಜಾನೆ ಚಾಲಕ ಎದ್ದು ಶೌಚಕ್ಕೆ ಹೋದ ವೇಳೆ ಘಟನೆ ಬೆಳಕಿಗೆ ಬಂದಿದೆ.
ಗದಗ ಜಿಲ್ಲೆಯ ಹಾಲೂರ ಗ್ರಾಮದ ಮುತ್ತಯ್ಯ ಸ್ವಾಮಿ, ಕಳೆದ ಹಲವು ವರ್ಷಗಳಿಂದ ಬಿಎಂಟಿಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ಬಿಎಂಟಿಸಿಯ 31 ರ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…