Featured

ಬೆಂಗಳೂರು:  ಪತ್ನಿಯ ಹಣದಾಹಕ್ಕೆ ಮನನೊಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಪತಿ – Vishwanews24

ಬೆಂಗಳೂರು:  ಪತ್ನಿಯ ಹಣದಾಹಕ್ಕೆ ಮನನೊಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಪತಿ

ಬೆಂಗಳೂರು: ‘ಪತ್ನಿಗೆ ಹಣದಾಹ ಹೆಚ್ಚು. ಎಷ್ಟು ದುಡಿದರೂ ಆಕೆಗೆ ಇನ್ನಷ್ಟು ಹಣಬೇಕಾಗಿತ್ತು. ಜೀವನದಲ್ಲಿ ನೆಮ್ಮದಿಯೇ ಇಲ್ಲ. ಜೀವನದಲ್ಲಿ ಇಂತಹ ಹೆಂಗಸು ನನಗೆ ಬೇಡ. ಮಗನೇ ನಿಮ್ಮ ಅಮ್ಮ ಸರಿಯಿಲ್ಲ. ಆಕೆ ಜತೆ ಇರಬೇಡ…’ ಎಂದು ಡೆತ್​ನೋಟ್​ ಬರೆದಿಟ್ಟು ವ್ಯಕ್ತಿಯೊಬ್ಬ ಸಾವಿನ ಮನೆಯ ಕದ ತಟ್ಟಿರುವ ಘಟನೆ ಹನುಮಂತನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪತ್ನಿಯ ಹಣದಾಹಕ್ಕೆ ಮನನೊಂದ ಪತಿ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಹೆಸರು ಅಣ್ಣಯ್ಯ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅಣ್ಣಯ್ಯ ಮತ್ತು ಉಮಾ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಮೂರು ವರ್ಷದ ಮಗ ಇದ್ದಾನೆ. ಅಣ್ಣಯ್ಯ ಬನಶಂಕರಿಯ ಬಾರ್​ವೊಂದರಲ್ಲಿ ಕ್ಯಾಶಿಯರ್​ ಆಗಿದ್ದ. ಉಮಾ ಮನೆಯಲ್ಲೇ ಇರುತ್ತಿದ್ದರು. ದಂಪತಿ ಶ್ರೀನಿವಾಸನಗರದಲ್ಲಿ ವಾಸವಾಗಿದ್ದರು.

ಕಾಂಗ್ರೆಸ್ ಮುಖಂಡ ರವಿರಾಜ ಕೊರವಿ ಬಿಜೆಪಿ ಸೇರ್ಪಡೆ – Vishwanews24

ಈ ಮಧ್ಯೆ ಪತ್ನಿ ಉಮಾ ಹೆಚ್ಚಿನ ಹಣಕ್ಕಾಗಿ ಪತಿ ಅಣ್ಣಯ್ಯಗೆ ಪೀಡಿಸುತ್ತಿದ್ದಳು. ಅದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಹೀಗಾಗಿ ಇದರಿಂದ ಬೇಸತ್ತ ಅಣ್ಣಯ್ಯ ಡೆತ್​ನೋಟ್​ ಬರೆದಿಟ್ಟು ಮನೆಯಲ್ಲಿ ಫ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಣ್ಣಯ್ಯ ಬರೆದ ಡೆತ್​ನೋಟ್​ ವೈರಲ್​ ಆಗಿದೆ. ‘ಜೀವನದಲ್ಲಿ ನನಗೆ ನೆಮ್ಮದಿಯೇ ಇಲ್ಲ. ನನ್ನ ಸಾವಿಗೆ ನನ್ನ ಹೆಂಡತಿಯೇ ಕಾರಣ. ಏಕೆಂದರೆ ಅವಳಿಗೆ ದುಡ್ಡೇ ಮುಖ್ಯ. ನಾನು ಏನೇ ಕೆಲಸ ಮಾಡಿದರೂ ನನ್ನ ಹೆಂಡತಿಗೆ ಇಷ್ಟ ಇಲ್ಲ. ಆದರೂ ಅವಳಿಗೆ ದುಡ್ಡು ಬೇಕು. ಎಷ್ಟು ದುಡಿದರೂ ಆಕೆಗೆ ಇನ್ನಷ್ಟು ಹಣಬೇಕಾಗಿತ್ತು. ದೇವರೇ ಇಂತಹ ಹೆಂಗಸು ನನಗೆ ಬೇಡ. ಯಾವ ಹುಡುಗರಿಗೂ ಇಂತಹ ಹೆಂಡತಿ ಸಿಗೋದು ಬೇಡ. ಜೀವನದಲ್ಲಿ ಇಂತಹ ಹೆಂಗಸು ನನಗೆ ಬೇಡ. ಮಗನೇ ನಿಮ್ಮ ಅಮ್ಮ ಸರಿಯಿಲ್ಲ. ಆಕೆ ಜತೆ ಇರಬೇಡ… ಮಿಸ್​ ಯೂ ಮಗನೇ’ ಎಂದು ಅಣ್ಣಯ್ಯ ಡೆತ್​ನೋಟ್​ ಬರೆದಿದ್ದಾರೆ.

🌀 ಕ್ಲಿನಿಕ್​ಗೆ ಬರುತ್ತಿದ್ದ ಮಹಿಳೆಯರ ಖಾಸಗಿ ಅಂಗಗಳ ರಹಸ್ಯ ವಿಡಿಯೋ ಫೋಟೋ ಸೆರೆ ಹಿಡಿದು ವಿಕೃತಿ.. 🌐 ಬೆಂಗಳೂರಿನ ನಕಲಿ ವೈದ್ಯನ ನಕಲಿ ವೈದ್ಯನ ಬಂಧಿಸಿದ ಪೊಲೀಸರು..

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago