Featured

ಬೆಂಗಳೂರು: ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಹಣ ವಸೂಲಿಗೆ ಯತ್ನ  ; ಕೋರಿಕೆ ಸ್ವೀಕರಿಸದಂತೆ ಸಲಹೆ – vishwanews24

ಬೆಂಗಳೂರು: ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಹಣ ವಸೂಲಿಗೆ ಯತ್ನ  ; ಕೋರಿಕೆ ಸ್ವೀಕರಿಸದಂತೆ ಸಲಹೆ

ಬೆಂಗಳೂರು: అಪರಿಚಿತರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ನಿಮ್ಮ ಸ್ನೇಹಿತರಿಗೆ ಹಣ ಕಳಹಿಸುವಂತೆ ಸಂದೇಶ ಕಳಿಸಬಹುದು. ಇದರ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಅವರು ಹೆಚ್ಚುತ್ತಿರುವ ಸೈಬರ್ ಕ್ರೈಂ ಬಗ್ಗೆ ಆಗಾಗ ಹೇಳುತ್ತಿದ್ದರು. ಆದರೆ, ಇದೀಗ ಸೈಬರ್ ಕಳ್ಳರು ನಗರ ಪೊಲೀಸ್ ಆಯುಕ್ತರನ್ನೂ ಬಿಟ್ಟಿಲ್ಲ. ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹಣ ವಸೂಲಿ ಮಾಡಲು ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ನಕಲಿ ಈ ವಿಚಾರ ಗೊತ್ತಾಗುತ್ತಿದ್ದಂತೆ ಖಾತೆಯನ್ನು ನಗರ ಸೈಬರ್ ಕ್ರೈಂ ಠಾಣೆ ಪೊಲೀಸರು ನಿಷ್ಕ್ರಿಯಗೊಳಿಸಿದ್ದಾರೆ.

ನಗರ ಪೊಲೀಸ್‌ ಕಮಿಷನರ್ ಬಿ.ದಯಾನಂದ ಅವರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಹಣ ವಸೂಲಿ ಯತ್ನ ನಡೆದಿದೆ. ಸೈಬರ್ ಕಳ್ಳರು ಬಿ.ದಯಾನಂದ್ ಹೆಸರಿನಲ್ಲಿ ನಕಲಿ ಖಾತೆ ತೆರೆದು, ಅವರ ಆಪ್ತರು, ಪೊಲೀಸ್ ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಸ್ನೇಹಿತರಾಗಲು ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದರು. ನಂತರ ಅವರಿಂದ ಹಣ ಲಪಟಾಯಿಸಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ವಿಚಾರ ಸೈಬರ್ ಅಪರಾಧ ವಿಭಾಗದ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ಫೇಸ್‌ಬುಕ್ ನಕಲಿ ಖಾತೆಯನ್ನು ನಿಷ್ಕ್ರಿಯ ಮಾಡಿ, ಆರೋಪಿ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.

ಕೋರಿಕೆ ಸ್ವೀಕರಿಸದಂತೆ ಸಲಹೆ: ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ಫೇಸ್‌ಬುಕ್ ಖಾತೆ ತೆರೆಯಲಾಗಿದ್ದು, ಕೋರಿಕೆಯನ್ನು ಸ್ವೀಕರಿಸಬಾರದು. ವಂಚಕರು ವೈಯಕ್ತಿಕ ಮಾಹಿತಿಯನ್ನು ಕದಿಯುವ ಅಥವಾ ಹಣಕ್ಕೆ ಬೇಡಿಕೆ ಇಡುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

9 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

9 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

10 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

10 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

10 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

11 hours ago