ಬೆಂಗಳೂರು: అಪರಿಚಿತರ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು ನಿಮ್ಮ ಸ್ನೇಹಿತರಿಗೆ ಹಣ ಕಳಹಿಸುವಂತೆ ಸಂದೇಶ ಕಳಿಸಬಹುದು. ಇದರ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಅವರು ಹೆಚ್ಚುತ್ತಿರುವ ಸೈಬರ್ ಕ್ರೈಂ ಬಗ್ಗೆ ಆಗಾಗ ಹೇಳುತ್ತಿದ್ದರು. ಆದರೆ, ಇದೀಗ ಸೈಬರ್ ಕಳ್ಳರು ನಗರ ಪೊಲೀಸ್ ಆಯುಕ್ತರನ್ನೂ ಬಿಟ್ಟಿಲ್ಲ. ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹಣ ವಸೂಲಿ ಮಾಡಲು ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ನಕಲಿ ಈ ವಿಚಾರ ಗೊತ್ತಾಗುತ್ತಿದ್ದಂತೆ ಖಾತೆಯನ್ನು ನಗರ ಸೈಬರ್ ಕ್ರೈಂ ಠಾಣೆ ಪೊಲೀಸರು ನಿಷ್ಕ್ರಿಯಗೊಳಿಸಿದ್ದಾರೆ.
ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು ಹಣ ವಸೂಲಿ ಯತ್ನ ನಡೆದಿದೆ. ಸೈಬರ್ ಕಳ್ಳರು ಬಿ.ದಯಾನಂದ್ ಹೆಸರಿನಲ್ಲಿ ನಕಲಿ ಖಾತೆ ತೆರೆದು, ಅವರ ಆಪ್ತರು, ಪೊಲೀಸ್ ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಸ್ನೇಹಿತರಾಗಲು ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದರು. ನಂತರ ಅವರಿಂದ ಹಣ ಲಪಟಾಯಿಸಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ವಿಚಾರ ಸೈಬರ್ ಅಪರಾಧ ವಿಭಾಗದ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ಫೇಸ್ಬುಕ್ ನಕಲಿ ಖಾತೆಯನ್ನು ನಿಷ್ಕ್ರಿಯ ಮಾಡಿ, ಆರೋಪಿ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.
ಕೋರಿಕೆ ಸ್ವೀಕರಿಸದಂತೆ ಸಲಹೆ: ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ಫೇಸ್ಬುಕ್ ಖಾತೆ ತೆರೆಯಲಾಗಿದ್ದು, ಕೋರಿಕೆಯನ್ನು ಸ್ವೀಕರಿಸಬಾರದು. ವಂಚಕರು ವೈಯಕ್ತಿಕ ಮಾಹಿತಿಯನ್ನು ಕದಿಯುವ ಅಥವಾ ಹಣಕ್ಕೆ ಬೇಡಿಕೆ ಇಡುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…