Featured

ಬೆಂಗಳೂರು : ಪ್ರಧಾನಮಂತ್ರಿಗಳೆಂದರೆ ಅವರೇನು ಸರ್ವಾಧಿಕಾರಿಯೇ :  ಸಿಎಂ – vishwanews24

ಬೆಂಗಳೂರು : ಪ್ರಧಾನಮಂತ್ರಿಗಳೆಂದರೆ ಅವರೇನು ಸರ್ವಾಧಿಕಾರಿಯೇ :  ಸಿಎಂ

ಬೆಂಗಳೂರು : ಪ್ರಧಾನಮಂತ್ರಿಗಳೆಂದರೆ ಅವರೇನು ಸರ್ವಾಧಿಕಾರಿಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ದುರಹಂಕಾರದಿಂದ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಮಧ್ಯಪ್ರದೇಶದ ಚುನಾವಣೆಯಲ್ಲಿ ನನ್ನ ಬಗ್ಗೆ ಮಾತನಾಡಬಹುದೇ ಎಂದು ಪ್ರಶ್ನಿಸಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸರ್ಕಾರ ಕೇವಲ ಶಾಸಕರನ್ನು ಸೆಳೆಯುವ ಕೆಲಸದಲ್ಲಿ ಮಗ್ನವಾಗಿದೆ ಎಂದಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿಯವರು ಯಾವಾಗ ಸತ್ಯವನ್ನು ಹೇಳಿದ್ದಾರೆ ಎಂದರು.

ಸುಳ್ಳು ಆರೋಪಗಳನ್ನು ಮಾಡುವುದು, ಸುಳ್ಳು ಹೇಳುವುದನ್ನು ಬಿಟ್ಟರೆ ಬೇರೆ ಏನೂ ಮಾಡುತ್ತಿಲ್ಲ. ವಿರೋಧ ಪಕ್ಷ ಎಂದ ಮೇಲೆ ಸಲಹೆಗಳನ್ನು ನೀಡಬೇಕು ಎಂದರು.

ಹಾಸನದ ಲೋಕಸಭಾ ಚುನಾವಣಾ ಅಭ್ಯರ್ಥಿ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಹಾಸನ ಜಿಲ್ಲೆಗೆ ಸಚಿವರನ್ನು ವೀಕ್ಷಕರಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿನ ಜನನಾಯಕರ ಅಭಿಪ್ರಾಯಗಳ ವರದಿಯನ್ನು ಪಡೆದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಶಾಸಕ ಬಸವರಾಜ ಯತ್ನಾಳ್ ಅವರು ಕಾಂಗ್ರೆಸ್ ಶೇಮ್‍ಲೆಸ್ ಸರ್ಕಾರ ಎಂದು ಹೇಳಿರುವ ಬಗ್ಗೆ ಮಾತನಾಡಿ ಯತ್ನಾಳ್ ಅವರೇ ಶೇಮ್‍ಲೆಸ್ ವ್ಯಕ್ತಿ. ಅವರ ನಡವಳಿಕೆ ಸರಿಯಿಲ್ಲದ ಕಾರಣ ಬಿಜೆಪಿ ಅವರಿಗೆ ನೋಟೀಸ್‌ ಜಾರಿ ಮಾಡಿತ್ತು ಎಂದು ಹೇಳಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago