ಬೆಂಗಳೂರು : ಪ್ರಧಾನಮಂತ್ರಿಗಳೆಂದರೆ ಅವರೇನು ಸರ್ವಾಧಿಕಾರಿಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ದುರಹಂಕಾರದಿಂದ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಮಧ್ಯಪ್ರದೇಶದ ಚುನಾವಣೆಯಲ್ಲಿ ನನ್ನ ಬಗ್ಗೆ ಮಾತನಾಡಬಹುದೇ ಎಂದು ಪ್ರಶ್ನಿಸಿದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸರ್ಕಾರ ಕೇವಲ ಶಾಸಕರನ್ನು ಸೆಳೆಯುವ ಕೆಲಸದಲ್ಲಿ ಮಗ್ನವಾಗಿದೆ ಎಂದಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿಯವರು ಯಾವಾಗ ಸತ್ಯವನ್ನು ಹೇಳಿದ್ದಾರೆ ಎಂದರು.
ಸುಳ್ಳು ಆರೋಪಗಳನ್ನು ಮಾಡುವುದು, ಸುಳ್ಳು ಹೇಳುವುದನ್ನು ಬಿಟ್ಟರೆ ಬೇರೆ ಏನೂ ಮಾಡುತ್ತಿಲ್ಲ. ವಿರೋಧ ಪಕ್ಷ ಎಂದ ಮೇಲೆ ಸಲಹೆಗಳನ್ನು ನೀಡಬೇಕು ಎಂದರು.
ಹಾಸನದ ಲೋಕಸಭಾ ಚುನಾವಣಾ ಅಭ್ಯರ್ಥಿ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಹಾಸನ ಜಿಲ್ಲೆಗೆ ಸಚಿವರನ್ನು ವೀಕ್ಷಕರಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿನ ಜನನಾಯಕರ ಅಭಿಪ್ರಾಯಗಳ ವರದಿಯನ್ನು ಪಡೆದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಶಾಸಕ ಬಸವರಾಜ ಯತ್ನಾಳ್ ಅವರು ಕಾಂಗ್ರೆಸ್ ಶೇಮ್ಲೆಸ್ ಸರ್ಕಾರ ಎಂದು ಹೇಳಿರುವ ಬಗ್ಗೆ ಮಾತನಾಡಿ ಯತ್ನಾಳ್ ಅವರೇ ಶೇಮ್ಲೆಸ್ ವ್ಯಕ್ತಿ. ಅವರ ನಡವಳಿಕೆ ಸರಿಯಿಲ್ಲದ ಕಾರಣ ಬಿಜೆಪಿ ಅವರಿಗೆ ನೋಟೀಸ್ ಜಾರಿ ಮಾಡಿತ್ತು ಎಂದು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…