ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ ಚಾಣಾಕ್ಷತನದಿಂದ ಬಸ್ ಕಂಡಕ್ಟರ್ ಬ್ಯಾಗ್ ಅನ್ನೇ ಮಹಿಳೆಯೊಬ್ಬಳು ಕಳುವು ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.
ಬೆಂಗಳೂರು ನಗರದಲ್ಲಿ KA 57F 6331 ಸಂಖ್ಯೆಯ ಬಿಎಂಟಿಸಿ ಬಸ್ಗೆ ಪ್ರಯಾಣಿಕಳಂತೆ ಹತ್ತಿದ್ದ ಮಹಿಳೆಯೊಬ್ಬಳು ನಿರ್ವಾಹಕರ ಗಮನ ಬೇರೆಡೆ ಇದ್ದಾಗ ಹಣದ ಬ್ಯಾಗ್ ಅನ್ನು ತನ್ನ ಚೀಲದಲ್ಲಿ ಇಟ್ಟುಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ.
ಕಳ್ಳತನದ ಬಳಿಕ ಬಸ್ನಲ್ಲೇ ಅಮಾಯಕಳಂತೆ ವರ್ತಿಸುತ್ತಿದ್ದ ವೇಳೆ ನಿರ್ವಾಹಕರಿಗೆ ಅನುಮಾನ ಬಂದಿದೆ. ಬಳಿಕ ಮಹಿಳೆಯನ್ನು ಪ್ರಶ್ನಿಸಿದಾಗ ಆಕೆ ಪರಾರಿಯಾಗಲು ಯತ್ನಿಸಿದ್ದಾಳೆ. ಈ ವೇಳೆ ಸ್ಥಳಕ್ಕೆ ಬಂದ ಮಹಿಳಾ ಪೊಲೀಸ್ ಸಿಬ್ಬಂದಿ ವಿಚಾರಣೆ ನಡೆಸಿದ್ದಾಗ, ‘ನಾನು ಮನೆಗೆ ಹೋಗಬೇಕು, ನನ್ನ ಗಂಡನಿಗೆ ಆರೋಗ್ಯ ಸರಿಯಿಲ್ಲ’ ಎಂದು ಹೇಳುತ್ತಾ ಹೈಡ್ರಾಮಾ ನಡೆಸಿದ್ದಾಳೆ. ಆದರೆ, ಆಕೆಯ ಚೀಲ ಪರಿಶೀಲಿಸಿದಾಗ ನಿರ್ವಾಹಕರ ಹಣದ ಬ್ಯಾಗ್ ಪತ್ತೆಯಾಗಿದೆ.
ಬಸ್ ನಿರ್ವಾಹಕರು ಮಹಿಳೆಯನ್ನು ಪೊಲೀಸರಿಗೆ ಒಪ್ಪಿಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ. ಇತ್ತೀಚಿನ ದಿನಗಳಲ್ಲಿ ಬಸ್ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಸರಗಳ್ಳತನ ಮತ್ತು ಪಿಕ್ಪಾಕೆಟ್ ಪ್ರಕರಣಗಳಲ್ಲಿ ಮಹಿಳೆಯರ ಶಾಮೀಲಾಗುವಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…
ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಸುರತ್ಕಲ್ : ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು…
ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ದಾರುಣ ಸಾವು ಮಲಪ್ಪುರಂ: ಮಿಕ್ಸ್ಚರ್ ತಿನ್ನುತ್ತಿದ್ದ ವೇಳೆ ಕಡಲೆಕಾಯಿ ಗಂಟಲಲ್ಲಿ ಸಿಲುಕಿದ…
ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು:…
ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…