ಬೆಂಗಳೂರು: ಪ್ರಿಯತಮೆಯೇ ಸಿನಿಮೀಯ ರೀತಿಯಲ್ಲಿ ಪ್ರಿಯಕರನ ಮೇಲೆ ರಾಬರಿ ಮಾಡಿಸಿ, ಪೊಲೀಸರ ಅತಿಥಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದೀಗ ಕಳ್ಳತನ ಮಾಡಿಸಿದ ಟೆಕ್ಕಿ ಶೃತಿ ಸೇರಿ ನಾಲ್ವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಕಳೆದ ಸೆಪ್ಟೆಂಬರ್ 20 ರಂದು ಪ್ರಿಯಕರ ವಂಶಿಕೃಷ್ಣರೆಡ್ಡಿ ಎಂಬಾತ ಶೃತಿ ಭೇಟಿಗೆ ತೆರಳಿದ್ದ. ಅದರಂತೆ ಭೇಟಿಯಾಗಿ ಆಕೆಯನ್ನು ಕರೆದುಕೊಂಡು ಹೊರಬರುತ್ತಿದ್ದಂತೆ ಸ್ವಿಫ್ಟ್ ಕಾರಿನಲ್ಲಿ ಬಂದವರು, ವಂಶಿಕೃಷ್ಣನ ಬೈಕ್ಗೆ ಡಿಕ್ಕಿ ಹೊಡೆದಿದ್ದಾರೆ.
ಈ ವೇಳೆ ಜಗಳ ತೆಗೆದು ಆತನ ಬಳಿಯಿದ್ದ ಮೊಬೈಲ್ ಕಸಿದುಕೊಂಡಿದ್ದಾರೆ. ಅಲ್ಲದೇ ವಂಶಿಕೃಷ್ಣನ ಜೊತೆಯಲ್ಲಿಯೇ ಇದ್ದ ಶೃತಿಯ ಮೊಬೈಲ್ನ್ನು ಸಹ ಕಸಿದು ಕೊಂಡಿದ್ದಾರೆ. ನಂತರ ದೂರು ಕೊಡುವುದು ಬೇಡ, ಮೊಬೈಲ್ ಹೋದರೆ ಹೋಗಲಿ ಎಂದು ಪ್ರಿಯತಮೆ ಶೃತಿ, ವಂಶಿ ಮುಂದೆ ಡ್ರಾಮ ಮಾಡಿದ್ದಾಳೆ. ಆದರೂ, ವಂಶಿಕೃಷ್ಣ ಬೆಳ್ಳಂದೂರು ಠಾಣೆಗೆ ಕಾರಿನ ನಂಬರ್ ಸಮೇತ ದೂರು ನೀಡಿದ್ದರು. ಈ ಕುರಿತು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.
ಪೊಲೀಸರ ವಿಚಾರಣೆ ವೇಳೆ ಶೃತಿಯೇ ಬೈಕ್ಗೆ ಡಿಕ್ಕಿ ಮಾಡಿ ಮೊಬೈಲ್ ಕಸಿದುಕೊಳ್ಳಲಿಕ್ಕೆ ಹೇಳಿದ್ದಳು ಎಂಬುದನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹೌದು, ಇತ್ತೀಚೆಗೆ ವಂಶಿಕೃಷ್ಣನಿಂದ ದೂರವಾಗಲು ಶೃತಿ ಯತ್ನಿಸುತ್ತಿದ್ದಳು. ಆದರೆ, ವಂಶಿಕೃಷ್ಣನ ಮೊಬೈಲ್ನಲ್ಲಿ ಇಬ್ಬರು ಜೊತೆಗಿದ್ದ ಫೋಟೋಗಳಿದ್ದವು. ಈ ಹಿನ್ನಲೆ ಫೋಟೋಸ್, ವಿಡಿಯೋಸ್ ಡಿಲೀಟ್ ಮಾಡಿಸಲಿಕ್ಕೆ ಒಂದೂವರೆ ಲಕ್ಷ ಹಣ ಕೊಟ್ಟು ಮೊಬೈಲ್ ರಾಬರಿ ಮಾಡುವ ಖರ್ತನಾಕ್ ಪ್ಲಾನ್ ಮಾಡಿರುವುದು ತನಿಖೆ ಬಳಿಕ ತಿಳಿದಿದೆ. ಸಧ್ಯ ಬೆಳ್ಳಂದೂರು ಪೊಲೀಸರಿಂದ ಟೆಕ್ಕಿ ಶೃತಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…