ಬೆಂಗಳೂರು: ಪ್ರಿಯತಮೆಯೇ ಸಿನಿಮೀಯ ರೀತಿಯಲ್ಲಿ ಪ್ರಿಯಕರನ ಮೇಲೆ ರಾಬರಿ ಮಾಡಿಸಿ, ಪೊಲೀಸರ ಅತಿಥಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದೀಗ ಕಳ್ಳತನ ಮಾಡಿಸಿದ ಟೆಕ್ಕಿ ಶೃತಿ ಸೇರಿ ನಾಲ್ವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಕಳೆದ ಸೆಪ್ಟೆಂಬರ್ 20 ರಂದು ಪ್ರಿಯಕರ ವಂಶಿಕೃಷ್ಣರೆಡ್ಡಿ ಎಂಬಾತ ಶೃತಿ ಭೇಟಿಗೆ ತೆರಳಿದ್ದ. ಅದರಂತೆ ಭೇಟಿಯಾಗಿ ಆಕೆಯನ್ನು ಕರೆದುಕೊಂಡು ಹೊರಬರುತ್ತಿದ್ದಂತೆ ಸ್ವಿಫ್ಟ್ ಕಾರಿನಲ್ಲಿ ಬಂದವರು, ವಂಶಿಕೃಷ್ಣನ ಬೈಕ್ಗೆ ಡಿಕ್ಕಿ ಹೊಡೆದಿದ್ದಾರೆ.
ಈ ವೇಳೆ ಜಗಳ ತೆಗೆದು ಆತನ ಬಳಿಯಿದ್ದ ಮೊಬೈಲ್ ಕಸಿದುಕೊಂಡಿದ್ದಾರೆ. ಅಲ್ಲದೇ ವಂಶಿಕೃಷ್ಣನ ಜೊತೆಯಲ್ಲಿಯೇ ಇದ್ದ ಶೃತಿಯ ಮೊಬೈಲ್ನ್ನು ಸಹ ಕಸಿದು ಕೊಂಡಿದ್ದಾರೆ. ನಂತರ ದೂರು ಕೊಡುವುದು ಬೇಡ, ಮೊಬೈಲ್ ಹೋದರೆ ಹೋಗಲಿ ಎಂದು ಪ್ರಿಯತಮೆ ಶೃತಿ, ವಂಶಿ ಮುಂದೆ ಡ್ರಾಮ ಮಾಡಿದ್ದಾಳೆ. ಆದರೂ, ವಂಶಿಕೃಷ್ಣ ಬೆಳ್ಳಂದೂರು ಠಾಣೆಗೆ ಕಾರಿನ ನಂಬರ್ ಸಮೇತ ದೂರು ನೀಡಿದ್ದರು. ಈ ಕುರಿತು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.
ಪೊಲೀಸರ ವಿಚಾರಣೆ ವೇಳೆ ಶೃತಿಯೇ ಬೈಕ್ಗೆ ಡಿಕ್ಕಿ ಮಾಡಿ ಮೊಬೈಲ್ ಕಸಿದುಕೊಳ್ಳಲಿಕ್ಕೆ ಹೇಳಿದ್ದಳು ಎಂಬುದನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹೌದು, ಇತ್ತೀಚೆಗೆ ವಂಶಿಕೃಷ್ಣನಿಂದ ದೂರವಾಗಲು ಶೃತಿ ಯತ್ನಿಸುತ್ತಿದ್ದಳು. ಆದರೆ, ವಂಶಿಕೃಷ್ಣನ ಮೊಬೈಲ್ನಲ್ಲಿ ಇಬ್ಬರು ಜೊತೆಗಿದ್ದ ಫೋಟೋಗಳಿದ್ದವು. ಈ ಹಿನ್ನಲೆ ಫೋಟೋಸ್, ವಿಡಿಯೋಸ್ ಡಿಲೀಟ್ ಮಾಡಿಸಲಿಕ್ಕೆ ಒಂದೂವರೆ ಲಕ್ಷ ಹಣ ಕೊಟ್ಟು ಮೊಬೈಲ್ ರಾಬರಿ ಮಾಡುವ ಖರ್ತನಾಕ್ ಪ್ಲಾನ್ ಮಾಡಿರುವುದು ತನಿಖೆ ಬಳಿಕ ತಿಳಿದಿದೆ. ಸಧ್ಯ ಬೆಳ್ಳಂದೂರು ಪೊಲೀಸರಿಂದ ಟೆಕ್ಕಿ ಶೃತಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…