Featured

ಬೆಂಗಳೂರು : ಪ್ರೀತಿ ನಿರಾಕರಿಸಿ ಬೇರೆ ಮದುವೆ – ಪ್ರೇಯಸಿಯ ಅತ್ಯಾಚಾರ ಮಾಡಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ – Vishwanews24

ಬೆಂಗಳೂರು : ಪ್ರೀತಿ ನಿರಾಕರಿಸಿ ಬೇರೆ ಮದುವೆ – ಪ್ರೇಯಸಿಯ ಅತ್ಯಾಚಾರ ಮಾಡಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

ಬೆಂಗಳೂರು : ಪ್ರೀತಿ ನಿರಾಕರಿಸಿ ಬೇರೊಬ್ಬ ಯುವಕನ ಜತೆ ಮದುವೆಯಾಗಲು ಮುಂದಾಗಿದ್ದ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಉಸಿರು ಗಟ್ಟಿಸಿ ಕೊಲೆ ಮಾಡಿದ ಪ್ರಿಯಕರನೊಬ್ಬ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ವಿಲ್ಸನ್‌ಗಾರ್ಡನ್‌ನಲ್ಲಿ ನಡೆದಿದೆ.

ವಿಲ್ಸನ್‌ಗಾರ್ಡನ್‌ ವಿನಾಯಕನಗರ ನಿವಾಸಿ 23 ವರ್ಷ ಪ್ರಾಯದ ಶಾಲಿನಿ ಕೊಲೆಯಾದ ಯುವತಿ. ಕೃತ್ಯ ಎಸಗಿದ ಆಕೆಯ ಪ್ರಿಯಕರ, ಕೆ.ಪಿ.ಅಗ್ರಹಾರ ನಿವಾಸಿ ಮನೋಜ್‌ ಆತ್ಮಹತ್ಯೆಗೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಆತ ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಂಡ ಬಳಿಕ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.9ನೇ ತರಗತಿ ವ್ಯಾಸಂಗ ಮಾಡಿದ್ದ ಶಾಲಿನಿ ಮತ್ತು ಆರೋಪಿ ಮನೋಜ್‌ ಈ ಹಿಂದೆ ಪ್ರತ್ಯೇಕ ಮೆಡಿಕಲ್‌ ಏಜೆನ್ಸಿಗಳಲ್ಲಿ ಕೆಲಸ ಮಾಡುತ್ತಿದ್ದರು.ಆಗ ಮನೋಜ್‌, ಶಾಲಿನಿಗೆ ಪ್ರೇಮ ನಿವೇದನೆ ಮಾಡಿ ಕೊಂಡಿದ್ದ. ಆದರೆ, ಆಕೆ ನಿರಾಕರಿಸಿದ್ದಳು.ಬಳಿಕ ಆತ ಕೆಲಸ ಬಿಟ್ಟು ರಸ್ತೆ ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರ ಜತೆ ಕೆಲಸ ಮಾಡುತ್ತಿದ್ದ.

ಈ ವೇಳೆ ಫೇಸ್‌ಬುಕ್‌ ಮೂಲಕ ಮತ್ತೆ ಇಬ್ಬರು ಪರಿಚಯವಾಗಿದ್ದು, ಬಳಿಕ ಇಬ್ಬರು ಆಗಾಗ ಭೇಟಿಯಾಗುತ್ತಿದ್ದರು.ಈ ಸಂದರ್ಭದಲ್ಲಿ ಮನೋಜ್‌ ಮತ್ತೂಮ್ಮೆ ಶಾಲಿನಿಗೆ ಪ್ರೇಮ ನಿವೇದಿಸಿದ್ದಾನೆ. ಆಕೆ ಕೂಡಾ ಒಪ್ಪಿಕೊಂಡು ಕಳೆದೊಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಈ ನಡುವೆ ಶಾಲಿನಿಗೆ ಆಕೆಯ ಪೋಷಕರು ಸಂಬಂಧಿ ಯುವಕನ ಜತೆ ಮದುವೆ ಮಾಡಲು ಮುಂದಾಗಿದ್ದು, ಸೋಮವಾರ ಮತ್ತು ಮಂಗಳವಾರ ಕೆಲ ಶುಭ ಕಾರ್ಯಗಳನ್ನು ಏರ್ಪಡಿಸಿದ್ದರು.ಮಂಗಳವಾರ ಸಂಜೆ ಪೋಷಕರು, ಸಂಬಂಧಿಕರು, ಶಾಲಿನಿ ಮನೆ ಸಮೀಪದ ಸಂಬಂಧಿ ಮನೆಯಲ್ಲಿದ್ದರು.

ಇದೇ ವೇಳೆ ಪ್ರೇಯಸಿ ಮತ್ತೂಂದು ಮದುವೆ ಆಗುತ್ತಿದ್ದಾಳೆ ಎಂಬ ವಿಚಾರ ತಿಳಿದ ಮನೋಜ್‌, ಸಂಜೆ 7 ಗಂಟೆ ಸುಮಾರಿಗೆ ವಿನಾಯಕ ನಗರದ ಶಾಲಿನಿ ಮನೆ ಬಳಿ ಬಂದಿದ್ದಾನೆ.

ಮನೆಯಲ್ಲಿ ಯಾರು ಇಲ್ಲದನ್ನು ಖಚಿತ ಪಡಿಸಿಕೊಂಡು ಆಕೆ ಜತೆ ಮದುವೆ ವಿಚಾರವಾಗಿ ಜಗಳಾಡಿದ್ದಾನೆ.ಆಕೆ ಪೋಷಕರ ತೀರ್ಮಾನವೇ ಅಂತಿಮ ಎಂದಿದ್ದಾಳೆ. ಆಕೆಯ ಮಾತಿನಿಂದ ಆಕ್ರೋಶಗೊಂಡ ಆರೋಪಿ, ಆಕೆ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ ಬಳಿಕ ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ.

ಬಳಿಕ ಕೆ.ಪಿ.ಅಗ್ರಹಾರದಲ್ಲಿರುವ ಆತನ ಮನೆಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಅದನ್ನು ಗಮನಿಸಿದ ಮನೆಯವರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮತ್ತೂಂದೆಡೆ ರಾತ್ರಿ 10 ಗಂಟೆ ಸುಮಾರಿಗೆ ಪೋಷಕರು ಮನೆಗೆ ಬಂದಾಗ ಶಾಲಿನಿ ಹತ್ಯೆ ಬೆಳಕಿಗೆ ಬಂದಿದೆ.

ಈ ಸಂಬಂಧ ವಿಲ್ಸನ್‌ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಕೊಲೆ, ಅತ್ಯಾಚಾರ ಪ್ರಕರಣ ಹಾಗೂ ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಮನೋಜ್‌ ವಿರುದ್ಧ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 hour ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 hour ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago