Featured

ಬೆಂಗಳೂರು : ಪ್ರೀತಿ ನಿರಾಕರಿಸಿ ಬೇರೆ ಮದುವೆ – ಪ್ರೇಯಸಿಯ ಅತ್ಯಾಚಾರ ಮಾಡಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ – Vishwanews24

ಬೆಂಗಳೂರು : ಪ್ರೀತಿ ನಿರಾಕರಿಸಿ ಬೇರೆ ಮದುವೆ – ಪ್ರೇಯಸಿಯ ಅತ್ಯಾಚಾರ ಮಾಡಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

ಬೆಂಗಳೂರು : ಪ್ರೀತಿ ನಿರಾಕರಿಸಿ ಬೇರೊಬ್ಬ ಯುವಕನ ಜತೆ ಮದುವೆಯಾಗಲು ಮುಂದಾಗಿದ್ದ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಉಸಿರು ಗಟ್ಟಿಸಿ ಕೊಲೆ ಮಾಡಿದ ಪ್ರಿಯಕರನೊಬ್ಬ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ವಿಲ್ಸನ್‌ಗಾರ್ಡನ್‌ನಲ್ಲಿ ನಡೆದಿದೆ.

ವಿಲ್ಸನ್‌ಗಾರ್ಡನ್‌ ವಿನಾಯಕನಗರ ನಿವಾಸಿ 23 ವರ್ಷ ಪ್ರಾಯದ ಶಾಲಿನಿ ಕೊಲೆಯಾದ ಯುವತಿ. ಕೃತ್ಯ ಎಸಗಿದ ಆಕೆಯ ಪ್ರಿಯಕರ, ಕೆ.ಪಿ.ಅಗ್ರಹಾರ ನಿವಾಸಿ ಮನೋಜ್‌ ಆತ್ಮಹತ್ಯೆಗೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಆತ ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಂಡ ಬಳಿಕ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.9ನೇ ತರಗತಿ ವ್ಯಾಸಂಗ ಮಾಡಿದ್ದ ಶಾಲಿನಿ ಮತ್ತು ಆರೋಪಿ ಮನೋಜ್‌ ಈ ಹಿಂದೆ ಪ್ರತ್ಯೇಕ ಮೆಡಿಕಲ್‌ ಏಜೆನ್ಸಿಗಳಲ್ಲಿ ಕೆಲಸ ಮಾಡುತ್ತಿದ್ದರು.ಆಗ ಮನೋಜ್‌, ಶಾಲಿನಿಗೆ ಪ್ರೇಮ ನಿವೇದನೆ ಮಾಡಿ ಕೊಂಡಿದ್ದ. ಆದರೆ, ಆಕೆ ನಿರಾಕರಿಸಿದ್ದಳು.ಬಳಿಕ ಆತ ಕೆಲಸ ಬಿಟ್ಟು ರಸ್ತೆ ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರ ಜತೆ ಕೆಲಸ ಮಾಡುತ್ತಿದ್ದ.

ಈ ವೇಳೆ ಫೇಸ್‌ಬುಕ್‌ ಮೂಲಕ ಮತ್ತೆ ಇಬ್ಬರು ಪರಿಚಯವಾಗಿದ್ದು, ಬಳಿಕ ಇಬ್ಬರು ಆಗಾಗ ಭೇಟಿಯಾಗುತ್ತಿದ್ದರು.ಈ ಸಂದರ್ಭದಲ್ಲಿ ಮನೋಜ್‌ ಮತ್ತೂಮ್ಮೆ ಶಾಲಿನಿಗೆ ಪ್ರೇಮ ನಿವೇದಿಸಿದ್ದಾನೆ. ಆಕೆ ಕೂಡಾ ಒಪ್ಪಿಕೊಂಡು ಕಳೆದೊಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಈ ನಡುವೆ ಶಾಲಿನಿಗೆ ಆಕೆಯ ಪೋಷಕರು ಸಂಬಂಧಿ ಯುವಕನ ಜತೆ ಮದುವೆ ಮಾಡಲು ಮುಂದಾಗಿದ್ದು, ಸೋಮವಾರ ಮತ್ತು ಮಂಗಳವಾರ ಕೆಲ ಶುಭ ಕಾರ್ಯಗಳನ್ನು ಏರ್ಪಡಿಸಿದ್ದರು.ಮಂಗಳವಾರ ಸಂಜೆ ಪೋಷಕರು, ಸಂಬಂಧಿಕರು, ಶಾಲಿನಿ ಮನೆ ಸಮೀಪದ ಸಂಬಂಧಿ ಮನೆಯಲ್ಲಿದ್ದರು.

ಇದೇ ವೇಳೆ ಪ್ರೇಯಸಿ ಮತ್ತೂಂದು ಮದುವೆ ಆಗುತ್ತಿದ್ದಾಳೆ ಎಂಬ ವಿಚಾರ ತಿಳಿದ ಮನೋಜ್‌, ಸಂಜೆ 7 ಗಂಟೆ ಸುಮಾರಿಗೆ ವಿನಾಯಕ ನಗರದ ಶಾಲಿನಿ ಮನೆ ಬಳಿ ಬಂದಿದ್ದಾನೆ.

ಮನೆಯಲ್ಲಿ ಯಾರು ಇಲ್ಲದನ್ನು ಖಚಿತ ಪಡಿಸಿಕೊಂಡು ಆಕೆ ಜತೆ ಮದುವೆ ವಿಚಾರವಾಗಿ ಜಗಳಾಡಿದ್ದಾನೆ.ಆಕೆ ಪೋಷಕರ ತೀರ್ಮಾನವೇ ಅಂತಿಮ ಎಂದಿದ್ದಾಳೆ. ಆಕೆಯ ಮಾತಿನಿಂದ ಆಕ್ರೋಶಗೊಂಡ ಆರೋಪಿ, ಆಕೆ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ ಬಳಿಕ ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ.

ಬಳಿಕ ಕೆ.ಪಿ.ಅಗ್ರಹಾರದಲ್ಲಿರುವ ಆತನ ಮನೆಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಅದನ್ನು ಗಮನಿಸಿದ ಮನೆಯವರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮತ್ತೂಂದೆಡೆ ರಾತ್ರಿ 10 ಗಂಟೆ ಸುಮಾರಿಗೆ ಪೋಷಕರು ಮನೆಗೆ ಬಂದಾಗ ಶಾಲಿನಿ ಹತ್ಯೆ ಬೆಳಕಿಗೆ ಬಂದಿದೆ.

ಈ ಸಂಬಂಧ ವಿಲ್ಸನ್‌ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಕೊಲೆ, ಅತ್ಯಾಚಾರ ಪ್ರಕರಣ ಹಾಗೂ ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಮನೋಜ್‌ ವಿರುದ್ಧ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ – vishwanews24

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ ಉಡುಪಿ : ಕಳೆದ…

9 minutes ago

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ‘ಲೈಟ್’ ದರದಲ್ಲಿ ಸಿಗಲಿದೆ  ಭರ್ಜರಿ ಲಾಭ -vishwanews24

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ  ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…

25 minutes ago

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ – vishwanews24

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…

40 minutes ago

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

16 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

19 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

19 hours ago