ಬೆಂಗಳೂರು: ಬಟ್ಟೆ ಕ್ಲೀನ್ ಇಲ್ಲವೆಂದು ವ್ಯಕ್ತಿಯನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ ಎಂದು ಎಂಡಿ ಮಹೇಶ್ವರನ್ ಹೇಳಿದ್ದಾರೆ.
ಹಾಕಿಕೊಂಡಿರುವ ಬಟ್ಟೆ ಕ್ಲೀನ್ ಇಲ್ಲ ಎಂಬ ಕಾರಣಕ್ಕಾಗಿ ರೈತರೊಬ್ಬರನ್ನು ಮೆಟ್ರೋ ಪ್ರವೇಶಿಸಲು ಅವಕಾಶ ನೀಡದೆ ಅಪಮಾನ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಜಾಲತಾಣದಲ್ಲಿ ಭಾರಿ ಆಕ್ರೋ ವ್ಯಕ್ತವಾಗಿತ್ತು.
ನಮ್ಮ ಮೆಟ್ರೋ ಸಿಬ್ಬಂದಿ ಮಾನವೀಯತೆಯನ್ನೇ ಮರೆತು ದೇಶದ ಬೆನ್ನೆಲುಬಾಗಿರುವ ರೈತನಿಗೆ ಅಪಮಾನ ಮಾಡಿದ್ದಾರೆ ಎಂಬ ಆಕ್ರೋಶ ಈಗ ಭುಗಿಲೆದ್ದಿದೆ. ಬೆಂಗಳೂರಿನ ರಾಜಾಜಿ ನಗರದ ಮೆಟ್ರೋ ಸ್ಟೇಷನ್ನಲ್ಲಿ ಮೆಟ್ರೋ ಸಿಬ್ಬಂದಿ ನಡೆಸಿರುವ ಈ ಅತಿರೇಕದ ವರ್ತನೆ ಸಹಪ್ರಯಾಣಿಕರೊಬ್ಬರ ಮೊಬೈಲ್ನಲ್ಲಿ ಸೆರೆಯಾಗಿದೆ.
ಬಟ್ಟೆ ಸ್ವಚ್ಛವಾಗಿಲ್ಲ ಎಂದು ವ್ಯಕ್ತಿಯೊಬ್ಬರಿಗೆ ಮೆಟ್ರೋ ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ್ದಾರೆ. ಈ ಘಟನೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಬಿಎಂಆರ್ ಸಿಎಲ್ ಸಿಬ್ಬಂದಿಯ ಅತಿರೇಕದ ವರ್ತನೆಯ ವೀಡಿಯೋ ಪ್ರಯಾಣಿಕರ ಮೊಬೈಲ್ನಲ್ಲಿ ಸೆರೆಯಾಗಿದೆ. ಬಳಿಕ ಸಹಪ್ರಯಾಣಿಕರು ಸಿಬ್ಬಂದಿ ಬಗ್ಗೆ ತಲೆಕೆಡಿಸಿಕೊಳ್ಳದೆ, ವ್ಯಕ್ತಿಯನ್ನು ಮೆಟ್ರೋದಲ್ಲಿ ಕರೆದೊಯ್ದಿದ್ದಾರೆ. ಅಲ್ಲದೇ ಮೆಟ್ರೋ ಸಿಬ್ಬಂದಿ ವಿರುದ್ಧ ಸಹಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…