ಬೆಂಗಳೂರು: ಬಟ್ಟೆ ಕ್ಲೀನ್ ಇಲ್ಲವೆಂದು ವ್ಯಕ್ತಿಯನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ ಎಂದು ಎಂಡಿ ಮಹೇಶ್ವರನ್ ಹೇಳಿದ್ದಾರೆ.
ಹಾಕಿಕೊಂಡಿರುವ ಬಟ್ಟೆ ಕ್ಲೀನ್ ಇಲ್ಲ ಎಂಬ ಕಾರಣಕ್ಕಾಗಿ ರೈತರೊಬ್ಬರನ್ನು ಮೆಟ್ರೋ ಪ್ರವೇಶಿಸಲು ಅವಕಾಶ ನೀಡದೆ ಅಪಮಾನ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಜಾಲತಾಣದಲ್ಲಿ ಭಾರಿ ಆಕ್ರೋ ವ್ಯಕ್ತವಾಗಿತ್ತು.
ನಮ್ಮ ಮೆಟ್ರೋ ಸಿಬ್ಬಂದಿ ಮಾನವೀಯತೆಯನ್ನೇ ಮರೆತು ದೇಶದ ಬೆನ್ನೆಲುಬಾಗಿರುವ ರೈತನಿಗೆ ಅಪಮಾನ ಮಾಡಿದ್ದಾರೆ ಎಂಬ ಆಕ್ರೋಶ ಈಗ ಭುಗಿಲೆದ್ದಿದೆ. ಬೆಂಗಳೂರಿನ ರಾಜಾಜಿ ನಗರದ ಮೆಟ್ರೋ ಸ್ಟೇಷನ್ನಲ್ಲಿ ಮೆಟ್ರೋ ಸಿಬ್ಬಂದಿ ನಡೆಸಿರುವ ಈ ಅತಿರೇಕದ ವರ್ತನೆ ಸಹಪ್ರಯಾಣಿಕರೊಬ್ಬರ ಮೊಬೈಲ್ನಲ್ಲಿ ಸೆರೆಯಾಗಿದೆ.
ಬಟ್ಟೆ ಸ್ವಚ್ಛವಾಗಿಲ್ಲ ಎಂದು ವ್ಯಕ್ತಿಯೊಬ್ಬರಿಗೆ ಮೆಟ್ರೋ ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ್ದಾರೆ. ಈ ಘಟನೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಬಿಎಂಆರ್ ಸಿಎಲ್ ಸಿಬ್ಬಂದಿಯ ಅತಿರೇಕದ ವರ್ತನೆಯ ವೀಡಿಯೋ ಪ್ರಯಾಣಿಕರ ಮೊಬೈಲ್ನಲ್ಲಿ ಸೆರೆಯಾಗಿದೆ. ಬಳಿಕ ಸಹಪ್ರಯಾಣಿಕರು ಸಿಬ್ಬಂದಿ ಬಗ್ಗೆ ತಲೆಕೆಡಿಸಿಕೊಳ್ಳದೆ, ವ್ಯಕ್ತಿಯನ್ನು ಮೆಟ್ರೋದಲ್ಲಿ ಕರೆದೊಯ್ದಿದ್ದಾರೆ. ಅಲ್ಲದೇ ಮೆಟ್ರೋ ಸಿಬ್ಬಂದಿ ವಿರುದ್ಧ ಸಹಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…