Featured

ಬೆಂಗಳೂರು : ಬರೋಬ್ಬರಿ 39 ಕೋಟಿ ರೂ. ತೆರಿಗೆ ಬಾಕಿ : ಬಿಬಿಎಂಪಿಯಿಂದ ಮಂತ್ರಿ ಮಾಲ್‍ಗೆ ಬೀಗ -Vishwanews24

ಬೆಂಗಳೂರು : 39 ಕೋಟಿ ರೂ. ತೆರಿಗೆ ಬಾಕಿ ಹಿನ್ನೆಲೆ : ಬಿಬಿಎಂಪಿಯಿಂದ ಮಂತ್ರಿ ಮಾಲ್‍ಗೆ ಬೀಗ -Vishwanews24

ಬೆಂಗಳೂರು: ಬರೋಬ್ಬರಿ 39 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ಬಿಬಿಎಂಪಿ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್‍ಗೆ ಬೀಗ ಹಾಕಿದೆ. ತೆರಿಗೆ ಕಟ್ಟುವವರೆಗೆ ಮಾಲ್ ಓಪನ್ ಮಾಡಲು ಬಿಡುವುದಿಲ್ಲ ಎಂದು ಬಿಬಿಎಂಪಿ ಖಡಕ್ ಎಚ್ಚರಿಕೆ ನೀಡಿದೆ.

ಕಳೆದ ಮೂರು ವರ್ಷಗಳಿಂದ ಮಂತ್ರಿ ಮಾಲ್ ತೆರಿಗೆ ಕಟ್ಟಿಲ್ಲ, ಬಡ್ಡಿ ಸೇರಿ ಒಟ್ಟು 39 ಕೋಟಿ ರೂ. ತೆರಿಗೆ ಬಾಕಿ ಉಳಿದಿದೆ. ಇಂದು ಪಾಲಿಕೆ ಅಧಿಕಾರಿಗಳು ವಸೂಲಿಗೆ ತೆರಳಿದ್ದರು. ಈ ವೇಳೆ ಸಹ ತೆರಿಗೆ ಕಟ್ಟಿಲ್ಲ. ಹೀಗಾಗಿ ಬೀಗ ಜಡಿಯಲಾಗಿದೆ ಎಂದು ಮಲ್ಲೇಶ್ವರ ಪಶ್ವಿಮ ಡಿಸಿ ಪ್ರಸನ್ನ ಕುಮಾರ್  ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಮಾದಕ ವಸ್ತು ಮಾರಾಟ : ಬಾಲಿವುಡ್ ಸೇರಿ ಹಲವಾರು ಚಿತ್ರದಲ್ಲಿ ನಟಿಸಿದ್ದ ನೈಜೀರಿಯನ್ ನಟನ ಬಂಧನ -Vishwanews24

ಎಷ್ಟೇ ನೋಟಿಸ್ ನೀಡಿದರೂ ಮಂತ್ರಿ ಮಾಲ್ ಮಾತ್ರ ಬುದ್ಧಿ ಕಲಿತಿಲ್ಲ. ಪ್ರತಿಷ್ಟಿತ ಮಂತ್ರಿ ಮಾಲ್ 39 ಕೋಟಿ ರೂಪಾಯಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದೆ. ತೆರಿಗೆ ಬಾಕಿ ಪಾವತಿಸುವಂತೆ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತರು ನೋಟಿಸ್ ನೀಡಿದ್ದರು. 2017ರಿಂದ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಬಾಕಿ ಹಿನ್ನೆಲೆ ಮಂತ್ರಿ ಮಾಲ್ ಗೆ ಬೀಗ ಹಾಕಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳಿಂದ ಮಂತ್ರಿ ಮಾಲ್ ಗೆ ಬೀಗ ಹಾಕಲಾಗಿತ್ತು. ಬಳಿಕ 5 ಕೋಟಿ ರೂ. ಪಾವತಿ, ಉಳಿದ ಹಣವನ್ನು ಅಕ್ಟೋಬರ್ ಅಂತ್ಯದ ವೇಳೆ ಕಟ್ಟುವುದಾಗಿ ಭರವಸೆ ನೀಡಿದ್ದರಿಂದ ಬೀಗ ತೆರವುಗೊಳಿಸಲಾಗಿದೆ.

ಆಸ್ತಿ ತೆರಿಗೆ ಪಾವತಿಸುವವರೆಗೂ ಮಂತ್ರಿ ಮಾಲ್‌ಗೆ ಬೀಗ ಮುಂದುವರಿಯಲಿದೆ. ಈ ಮಧ್ಯೆ, ಆಸ್ತಿ ತೆರಿಗೆ ಪಾವತಿಸಲು ಮಂತ್ರಿ ಮಾಲ್‌ ನೀಡಿದ್ದ ಚೆಕ್ ಬೌನ್ಸ್ ಅಗಿದೆ. ಮಂತ್ರಿ ಮಾಲ್‌ನವರು ನೀಡಿದ್ದ ಚೆಕ್ ಬೌನ್ಸ್ ಆದ ಪ್ರಕರಣ ನ್ಯಾಯಾಲಯದಲ್ಲಿ ಇದೆ. ಹಾಗಾಗಿ ಇವತ್ತು ಡಿಡಿ ಮುಖಾಂತರ ಪಾವತಿ ಮಾಡಬೇಕಾಗಿದೆ.

ಬಿಬಿಎಂಪಿ (BBMP) ಪಶ್ಚಿಮ ವಲಯದಲ್ಲಿ ಅತೀ ದೊಡ್ಡ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಮಂತ್ರಿ ಮಾಲ್​ ಮೊದಲ ಸ್ಥಾನದಲ್ಲಿದೆ. ಮಲ್ಲೇಶ್ವರಕ್ಕೆ ಸ್ವಾಗತ ಕೋರುವಂತೆ ಸಂಪಿಗೆ ರಸ್ತೆಯ ಆರಂಭದಲ್ಲಿರುವ ಮಂತ್ರಿ ಮಾಲ್ (Mantri Square Mall ) ಬರೋಬ್ಬರಿ 20,33,34,828 ರೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ.

ಇದನ್ನೂ ಓದಿ : ಬಹುದಿನಗಳ ಕನಸು ನನಸು : ಕೇರಳದ ಮುಸ್ಲಿಂ ಯುವತಿಯಿಂದ ದೇವಸ್ಥಾನಕ್ಕೆ ಶ್ರೀಕೃಷ್ಣನ ಚಿತ್ರ ಉಡುಗೊರೆ -Vishwanews24

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

13 hours ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

13 hours ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

14 hours ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

14 hours ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

14 hours ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

14 hours ago