ಬೆಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿರುವುದಾಗಿ ಆರೋಪ ಕೇಳಿಬಂದಿದೆ.
ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾ ಮೃತ ಬಾಣಂತಿ ಎಂದು ಗುರುತಿಸಲಾಗಿದೆ.
ಒಂದು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಅನುಷಾ, ಅನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾದ ವೇಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಅನುಷಾಗೆ ತರೀಕೆರೆಯ ರಾಜ್ ನರ್ಸಿಂಗ್ ಹೋಂನಲ್ಲಿ ಸಹಜ ಹೆರಿಗೆ ಆಗಿತ್ತು. ನಂತರ, ಸ್ಕ್ಯಾನಿಂಗ್ ಮಾಡಿ ಹೊಟ್ಟೆಯಲ್ಲಿ ಕಲ್ಲು ಇದೆ ಎಂದು ವೈದ್ಯರು ತಿಳಿಸಿದ್ದರು. ಅದೇ ವರದಿ ಆಧಾರದ ಮೇಲೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ವೈದ್ಯರು ಎಡವಟ್ಟು ಮಾಡಿದ್ದಾರೆಂದು ಕುಟುಂಬದವರು ಆರೋಪ ಮಾಡಿದ್ದಾರೆ.
ಶಸ್ತ್ರಚಿಕಿತ್ಸೆ ವೇಳೆ ಕರುಳಿಗೆ ಹಾನಿಯಾಗಿತ್ತು, ಆದರೆ, ಆ ವಿಚಾರವನ್ನು ವೈದ್ಯರು ಮುಚ್ಚಿಟ್ಟಿದ್ದಾರೆ. ಶಸ್ತ್ರಚಿಕಿತ್ಸೆ ನಂತರ ಮನೆಗೆ ತೆರಳಿದಾಗ ಬಾಣಂತಿಯ ಕೈ ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಹೀಗಾಗಿ ಆಕೆಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರಿಶೀಲಿಸಿದ ವೈದ್ಯರು, ಆರೋಗ್ಯ ಸಹಜವಾಗಿದೆ. ಏನೂ ಸಮಸ್ಯೆ ಇಲ್ಲ ಎಂದಿದ್ದರು. ಹೀಗಾಗಿ ಮತ್ತೆ ಸ್ಥಳೀಯ ಆಸ್ಪತ್ರೆಗೆ ಅನುಷಾರನ್ನು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು, ಅನುಷಾಗೆ ಕಾಮಾಲೆ ಇದೆ ಎಂದಿದ್ದರು. ಸ್ಥಳೀಯ ಆಸ್ಪತ್ರೆ ವೈದ್ಯರ ಸಲಹೆಯಂತೆ ಅನುಷಾರನ್ನು ಕುಟುಂಬಸ್ಥರು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸ್ಥಳೀಯ ಪೊಳೀಸ್ ಠಾಣೆಯಲ್ಲಿ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…