Featured

ಬೆಂಗಳೂರು-ಬೆಳಗಾವಿ ನೂತನ ವಂದೇ ಭಾರತ್’ ರೈಲು : ಆ.10ರಂದು ಮೋದಿ ಚಾಲನೆ – vishwanews24

ಬೆಂಗಳೂರು-ಬೆಳಗಾವಿ ನೂತನ ವಂದೇ ಭಾರತ್’ ರೈಲು : ಆ.10ರಂದು ಮೋದಿ ಚಾಲನೆ

ನವದೆಹಲಿ/ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕೋರಿಕೆಯಂತೆ ಬೆಂಗಳೂರು-ಬೆಳಗಾವಿ ನೂತನ `ವಂದೇ ಭಾರತ್’ ರೈಲು  ಸೇರಿದಂತೆ ಒಟ್ಟು 3 ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆ.10ರಂದು ಚಾಲನೆ ನೀಡಲಿದ್ದಾರೆ. ಆಗಸ್ಟ್ 10ರ ಭಾನುವಾರ ಕರ್ನಾಟಕ ಪ್ರವಾಸ ಕೈಗೊಂಡ ವೇಳೆ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜ್ಯದಲ್ಲಿ 3 ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪೂನಾ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೋದೇವಿ ಕಾರ್ತ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚಾರ ಆರಂಭಿಸಲಿವೆ.

ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ವೇಳಾಪಟ್ಟಿ
ಈ ನೂತನ ವಂದೇ ಭಾರತ್ ರೈಲು ಬೆಳಗಾವಿಯಿಂದ ಬೆಳಗ್ಗೆ 5:20ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1:50ಕ್ಕೆ ತಲುಪಲಿದೆ. ವಾಪಸ್ ಬೆಂಗಳೂರಿನಿಂದ ಮಧ್ಯಾಹ್ನ 2:20ಕ್ಕೆ ಹೊರಟು ರಾತ್ರಿ 10:40ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ಸಂಚಾರದಿಂದ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಮಧ್ಯೆ ಸಂಪರ್ಕ ಹೆಚ್ಚಲಿದ್ದು, ಈ ಭಾಗದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

13 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

14 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago