ಬೆಂಗಳೂರು: ನಗರದಲ್ಲಿ ಪುಡಿರೌಡಿಗಳ ಹಾವಳಿ ಮತ್ತೆ ಹೆಚ್ಚಾಗಿದ್ದು, ಸಿಗರೇಟ್ ಹಣ ಕೇಳಿದಕ್ಕೆ ಅಂಗಡಿ ಹುಡುಗರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ 1.90 ಲಕ್ಷ ರೂ. ಎಗರಿಸಿ, ಪ್ರಾಣಬೆದರಿಕೆ ಹಾಕಿರುವ ಪ್ರಕರಣ ಕುಂದಲಹಳ್ಳಿಗೇಟ್ ಸಮೀಪದ ಕಾಂಡಿಮೆಂಟ್ಸ್ವೊಂದರಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಡೆಲಿವರಿ ಬಾಯ್ ಕಾರ್ತಿಕ್(20), ಅಲ್ಯೂಮಿನಿಯಂ ವರ್ಕ್ ಮಾಡುವ ಸಲ್ಮಾನ್(20) ಖಾಸಗಿ ಹೊಟೇಲ್ ಮ್ಯಾನೇಜರ್ ಕಾರ್ತಿಕ್(23) ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ವೈಟ್ಫೀಲ್ಡ್ ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ಉಡುಪಿಯ ಬೈಂದೂರು ಮೂಲದ ನವೀನ್ ಕುಮಾರ್ ಹಾಗೂ ಪ್ರಜ್ವಲ್ ಶೆಟ್ಟಿ, ನಿತೀನ್ ಶೆಟ್ಟಿ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಈ ಘಟನೆ ಅಂಗಡಿಯಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಡಿ.8 ರಾತ್ರಿ 11.30 ರ ಸಮಯದಲ್ಲಿ 7-8 ಜನರ ರೌಡಿಗಳ ಗುಂಪು ಕುಂದಲಹಳ್ಳಿ ಗೇಟ್ ಬಳಿಯಿರುವ ಬ್ರಹ್ಮಲಿಂಗೇಶ್ವರ ಬೇಕರಿಗೆ ಟೀ ಕುಡಿಯಲು ಮತ್ತು ಸಿಗರೇಟ್ ಸೇದಲು ಹೋಗಿದ್ದಾರೆ. ಬೇಕರಿಯವರು ಸಿಗರೇಟ್ ನೀಡಿ ಹಣ ಕೇಳಿದ್ದಾರೆ. ಹಣ ಕೇಳಿದ್ದಕ್ಕೆ ಬೇಕರಿ ಹುಡುಗರಿಗೆ ಪುಡಿ ರೌಡಿಗಳು ಅವ್ಯಾಚ್ಯ ಶಬ್ಧಗಳಿಂದ ನಿಂದಿಸುತ್ತಾ, ಮನಸೋ ಇಚ್ಚೆ ಹಿಗ್ಗಾಮುಗ್ಗಾ ಥಳಿಸಿ ಹಣ ತೆಗೆದುಕೊಂಡು ಪರಾರಿಯಾಗಿದ್ದರು. ಹಲ್ಲೆಗೊಳಗಾದವರು ಎಚ್ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…