ಬೆಂಗಳೂರು: ನಗರದಲ್ಲಿ ಪುಡಿರೌಡಿಗಳ ಹಾವಳಿ ಮತ್ತೆ ಹೆಚ್ಚಾಗಿದ್ದು, ಸಿಗರೇಟ್ ಹಣ ಕೇಳಿದಕ್ಕೆ ಅಂಗಡಿ ಹುಡುಗರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ 1.90 ಲಕ್ಷ ರೂ. ಎಗರಿಸಿ, ಪ್ರಾಣಬೆದರಿಕೆ ಹಾಕಿರುವ ಪ್ರಕರಣ ಕುಂದಲಹಳ್ಳಿಗೇಟ್ ಸಮೀಪದ ಕಾಂಡಿಮೆಂಟ್ಸ್ವೊಂದರಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಡೆಲಿವರಿ ಬಾಯ್ ಕಾರ್ತಿಕ್(20), ಅಲ್ಯೂಮಿನಿಯಂ ವರ್ಕ್ ಮಾಡುವ ಸಲ್ಮಾನ್(20) ಖಾಸಗಿ ಹೊಟೇಲ್ ಮ್ಯಾನೇಜರ್ ಕಾರ್ತಿಕ್(23) ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ವೈಟ್ಫೀಲ್ಡ್ ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ಉಡುಪಿಯ ಬೈಂದೂರು ಮೂಲದ ನವೀನ್ ಕುಮಾರ್ ಹಾಗೂ ಪ್ರಜ್ವಲ್ ಶೆಟ್ಟಿ, ನಿತೀನ್ ಶೆಟ್ಟಿ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಈ ಘಟನೆ ಅಂಗಡಿಯಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಡಿ.8 ರಾತ್ರಿ 11.30 ರ ಸಮಯದಲ್ಲಿ 7-8 ಜನರ ರೌಡಿಗಳ ಗುಂಪು ಕುಂದಲಹಳ್ಳಿ ಗೇಟ್ ಬಳಿಯಿರುವ ಬ್ರಹ್ಮಲಿಂಗೇಶ್ವರ ಬೇಕರಿಗೆ ಟೀ ಕುಡಿಯಲು ಮತ್ತು ಸಿಗರೇಟ್ ಸೇದಲು ಹೋಗಿದ್ದಾರೆ. ಬೇಕರಿಯವರು ಸಿಗರೇಟ್ ನೀಡಿ ಹಣ ಕೇಳಿದ್ದಾರೆ. ಹಣ ಕೇಳಿದ್ದಕ್ಕೆ ಬೇಕರಿ ಹುಡುಗರಿಗೆ ಪುಡಿ ರೌಡಿಗಳು ಅವ್ಯಾಚ್ಯ ಶಬ್ಧಗಳಿಂದ ನಿಂದಿಸುತ್ತಾ, ಮನಸೋ ಇಚ್ಚೆ ಹಿಗ್ಗಾಮುಗ್ಗಾ ಥಳಿಸಿ ಹಣ ತೆಗೆದುಕೊಂಡು ಪರಾರಿಯಾಗಿದ್ದರು. ಹಲ್ಲೆಗೊಳಗಾದವರು ಎಚ್ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…