Featured

ಬೆಂಗಳೂರು : ಭರ್ಜರಿ ಆಫರ್​ ನೊಂದಿಗೆ  18 ಜಟ್ಕಾ ಕಟ್ ಅಂಗಡಿಗಳು ಓಪನ್‌  – Vishwanews24

ಬೆಂಗಳೂರು : ಯುಗಾದಿ ಹಬ್ಬ ಮುಸ್ಲಿಂ ವ್ಯಾಪಾರಿಗಳಿಗೆ ಠಕ್ಕರ್ – ಭರ್ಜರಿ ಆಫರ್​ ನೊಂದಿಗೆ  18 ಜಟ್ಕಾ ಕಟ್ ಅಂಗಡಿಗಳು ಓಪನ್‌

ಬೆಂಗಳೂರು : ನಗರದಲ್ಲಿ ನಿನ್ನೆ ಭಕ್ತಿಭಾವದಿಂದ ಯುಗಾದಿ ಹಬ್ಬವನ್ನು ಆಚರಿಸಲಾಯಿತು. ಯುಗಾದಿ ಹಬ್ಬದ ಮಾರನೇ ದಿನ ಅಂದರೆ, ಚೈತ್ರ ಶುದ್ಧ ದ್ವಿತೀಯದಂದು ಹೊಸತೊಡಕು ಎಂದು ಆಚರಿಸಲು ಸಜ್ಜಾಗಿದ್ದಾರೆ.

ನಾನ್‌ವೆಜ್‌ ಪ್ರಿಯರು ಹೊಸ ತೊಡಕು ಸಂಭ್ರಮದಲ್ಲಿ ತೊಡಗಿದ್ದು ಮಾಂಸ ಖರೀದಿಗಾಗಿ ಬೆಳಗ್ಗೆ 6 ಗಂಟೆಯಿಂದಲೂ ಮಾಂಸದಂಗಡಿಗಳ ಎದುರು ಮುಗಿಬಿದ್ದಿದ್ದಾರೆ.

ಕುರಿ‌ಮಾಂಸ ಕಳೆದ ವರ್ಷಕ್ಕಿಂತ ಈ ಬಾರಿ ದುಬಾರಿ ಬೆಲೆಗೆ ಮಾರಾಟವಾಗುತ್ತಿದೆ. ಒಂದು ಕೆಜಿಗೆ 700 ರೂ ದರ ನಿಗದಿ ಮಾಡಲಾಗಿದೆ. ಕಳೆದ ಬಾರಿ ನಾಲ್ಕು ಜಟ್ಕಾ ಕಟ್ ಶಾಪ್​ಗಳನ್ನು ತೆರೆಯಲಾಗಿತ್ತು. ಆದರೆ ಈ ಬಾರಿ 18 ಜಟ್ಕಾ ಕಟ್ ಅಂಗಡಿಗಳು ಓಪನ್‌ ಆಗಿದ್ದು, ಅದರಲ್ಲಿ ಕಮ್ಮನಹಳ್ಳಿ, ಇಟ್ಟಮಡು, ದಾಸರಹಳ್ಳಿ, ಸಂಜಯ್ ನಗರ, ಗೆದ್ದಲಹಳ್ಳಿ, ಯಲಹಂಕ, ಇಂದಿರಾನಗರ, ಟ್ಯಾನರಿ ರಸ್ತೆ, ಹೊರಮಾವು, ಅನ್ನಪೂರ್ಣೇಶ್ವರಿನಗರ ತೆರೆಯಲಾಗಿದೆ ಎಂದು ವರದಿಯಾಗಿದೆ.

ಹಲಾಲ್ ಬಾಯ್ಕಾಟ್ ಅಭಿಯಾನದ ಹಿನ್ನೆಲೆ ರಾಜಸ್ಥಾನದ ಅಜ್ಮೇರ್ ನಿಂದ 200, ಬಾಸವನಬಾಗೇವಾಡಿ, ಮಧುಗಿರಿಯಿಂದ 400. ಒಟ್ಟು 600 ಕುರಿ ಮತ್ತು ಮೇಕೆಗಳುಬೆಂಗಳೂರಿಗೆ ಬಂದಿವೆ. ಅಷ್ಟೇ ಅಲ್ಲದೇ ವ್ಯಾಪಾರದ ಹಿತ ದೃಷ್ಟಿಯಿಂದ ಆನ್ಲೈನ್ ಮತ್ತು ಡೋರ್ ಡೆಲಿವರಿ ವ್ಯವಸ್ಥೆಕೂಡ ಕಲ್ಪಿಸಲಾಗಿದೆ.

2 ಕೆಜಿ ಮಟನ್, 2 ಕೆಜಿ ಚಿಕನ್, 6 ಮೊಟ್ಟೆ 1999 ರೂ ಕಾಂಬೋ ನೀಡಲಾಗುತ್ತಿದೆ. ಹಿಂದವೀ ಮೀಟ್ ಮಾರ್ಟ್ 1200 ಸಾವಿರ ಕೆಜಿ ಜಟ್ಕಾ ಕಟ್ ರೆಡಿ ಮಾಡಿದೆ. ಗುಡ್ಡೆ ಮಾಂಸ ಕೆಜಿ- 650, ಕೆಜಿ ಮಟನ್- 700, ಚಿಕನ್- 130 ರಿಂದ 140 ರುಪಾಯಿಗೆ ಮಾರಾಟ ಮಾಡಲಾಗುತ್ತಿದೆ. ರೇಟ್‌ ಎಷ್ಟೇ ಅಗಿದ್ದು ವರ್ಷಕ್ಕೆ ಒಮ್ಮೆ ಬರುವ ಹೊಸತೊಡಕಿನ ಹಬ್ಬವನ್ನು ಆಚರಣೆ ಮಾಡಲೇ ಬೇಕಾಗುತ್ತದೆ ಎಷ್ಟೆ ಇದ್ದರು ನಾವು ಹಬ್ಬ ಮಾಡುತ್ತೇವೆ ಎಂದು ಗ್ರಾಹಕರು ತಿಳಿಸುತ್ತಿದ್ದಾರೆ.

ಒಟ್ಟಾರೆಯಾಗಿ ಮಟನ್ ಬಿರಿಯಾನಿ, ಚಿಕನ್ ಬಿರಿಯಾನಿ, ಚಿಲ್ಲಿ ಚಿಕನ್, ಪೆಪ್ಪರ್ ಚಿಕನ್, ಫಿಶ್ ಕರಿ, ಫಿಶ್ ಫ್ರೈ, ತಲೆ ಕಾಲ್ ಮಾಂಸ, ಕಾಲ್ ಸೂಪ್ ಹೇಗಪ್ಪಾ ಮಾಡುವುದು ಎಂದು ನಾನ್ ವೆಜ್ ಪ್ರಿಯರು ಯೋಚನೆ ಮಾಡತ್ತಿದ್ದರೆ, ಇತ್ತ ವ್ಯಾಪಾರಿಗಳು ಫುಲ್ ಖುಷಿಯಾಗಿದಂತೂ ಸುಳ್ಳಲ್ಲ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

5 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

5 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

5 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

5 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

6 hours ago