ಬೆಂಗಳೂರು : ನಗರದಲ್ಲಿ ನಿನ್ನೆ ಭಕ್ತಿಭಾವದಿಂದ ಯುಗಾದಿ ಹಬ್ಬವನ್ನು ಆಚರಿಸಲಾಯಿತು. ಯುಗಾದಿ ಹಬ್ಬದ ಮಾರನೇ ದಿನ ಅಂದರೆ, ಚೈತ್ರ ಶುದ್ಧ ದ್ವಿತೀಯದಂದು ಹೊಸತೊಡಕು ಎಂದು ಆಚರಿಸಲು ಸಜ್ಜಾಗಿದ್ದಾರೆ.
ನಾನ್ವೆಜ್ ಪ್ರಿಯರು ಹೊಸ ತೊಡಕು ಸಂಭ್ರಮದಲ್ಲಿ ತೊಡಗಿದ್ದು ಮಾಂಸ ಖರೀದಿಗಾಗಿ ಬೆಳಗ್ಗೆ 6 ಗಂಟೆಯಿಂದಲೂ ಮಾಂಸದಂಗಡಿಗಳ ಎದುರು ಮುಗಿಬಿದ್ದಿದ್ದಾರೆ.
ಕುರಿಮಾಂಸ ಕಳೆದ ವರ್ಷಕ್ಕಿಂತ ಈ ಬಾರಿ ದುಬಾರಿ ಬೆಲೆಗೆ ಮಾರಾಟವಾಗುತ್ತಿದೆ. ಒಂದು ಕೆಜಿಗೆ 700 ರೂ ದರ ನಿಗದಿ ಮಾಡಲಾಗಿದೆ. ಕಳೆದ ಬಾರಿ ನಾಲ್ಕು ಜಟ್ಕಾ ಕಟ್ ಶಾಪ್ಗಳನ್ನು ತೆರೆಯಲಾಗಿತ್ತು. ಆದರೆ ಈ ಬಾರಿ 18 ಜಟ್ಕಾ ಕಟ್ ಅಂಗಡಿಗಳು ಓಪನ್ ಆಗಿದ್ದು, ಅದರಲ್ಲಿ ಕಮ್ಮನಹಳ್ಳಿ, ಇಟ್ಟಮಡು, ದಾಸರಹಳ್ಳಿ, ಸಂಜಯ್ ನಗರ, ಗೆದ್ದಲಹಳ್ಳಿ, ಯಲಹಂಕ, ಇಂದಿರಾನಗರ, ಟ್ಯಾನರಿ ರಸ್ತೆ, ಹೊರಮಾವು, ಅನ್ನಪೂರ್ಣೇಶ್ವರಿನಗರ ತೆರೆಯಲಾಗಿದೆ ಎಂದು ವರದಿಯಾಗಿದೆ.
ಹಲಾಲ್ ಬಾಯ್ಕಾಟ್ ಅಭಿಯಾನದ ಹಿನ್ನೆಲೆ ರಾಜಸ್ಥಾನದ ಅಜ್ಮೇರ್ ನಿಂದ 200, ಬಾಸವನಬಾಗೇವಾಡಿ, ಮಧುಗಿರಿಯಿಂದ 400. ಒಟ್ಟು 600 ಕುರಿ ಮತ್ತು ಮೇಕೆಗಳುಬೆಂಗಳೂರಿಗೆ ಬಂದಿವೆ. ಅಷ್ಟೇ ಅಲ್ಲದೇ ವ್ಯಾಪಾರದ ಹಿತ ದೃಷ್ಟಿಯಿಂದ ಆನ್ಲೈನ್ ಮತ್ತು ಡೋರ್ ಡೆಲಿವರಿ ವ್ಯವಸ್ಥೆಕೂಡ ಕಲ್ಪಿಸಲಾಗಿದೆ.
2 ಕೆಜಿ ಮಟನ್, 2 ಕೆಜಿ ಚಿಕನ್, 6 ಮೊಟ್ಟೆ 1999 ರೂ ಕಾಂಬೋ ನೀಡಲಾಗುತ್ತಿದೆ. ಹಿಂದವೀ ಮೀಟ್ ಮಾರ್ಟ್ 1200 ಸಾವಿರ ಕೆಜಿ ಜಟ್ಕಾ ಕಟ್ ರೆಡಿ ಮಾಡಿದೆ. ಗುಡ್ಡೆ ಮಾಂಸ ಕೆಜಿ- 650, ಕೆಜಿ ಮಟನ್- 700, ಚಿಕನ್- 130 ರಿಂದ 140 ರುಪಾಯಿಗೆ ಮಾರಾಟ ಮಾಡಲಾಗುತ್ತಿದೆ. ರೇಟ್ ಎಷ್ಟೇ ಅಗಿದ್ದು ವರ್ಷಕ್ಕೆ ಒಮ್ಮೆ ಬರುವ ಹೊಸತೊಡಕಿನ ಹಬ್ಬವನ್ನು ಆಚರಣೆ ಮಾಡಲೇ ಬೇಕಾಗುತ್ತದೆ ಎಷ್ಟೆ ಇದ್ದರು ನಾವು ಹಬ್ಬ ಮಾಡುತ್ತೇವೆ ಎಂದು ಗ್ರಾಹಕರು ತಿಳಿಸುತ್ತಿದ್ದಾರೆ.
ಒಟ್ಟಾರೆಯಾಗಿ ಮಟನ್ ಬಿರಿಯಾನಿ, ಚಿಕನ್ ಬಿರಿಯಾನಿ, ಚಿಲ್ಲಿ ಚಿಕನ್, ಪೆಪ್ಪರ್ ಚಿಕನ್, ಫಿಶ್ ಕರಿ, ಫಿಶ್ ಫ್ರೈ, ತಲೆ ಕಾಲ್ ಮಾಂಸ, ಕಾಲ್ ಸೂಪ್ ಹೇಗಪ್ಪಾ ಮಾಡುವುದು ಎಂದು ನಾನ್ ವೆಜ್ ಪ್ರಿಯರು ಯೋಚನೆ ಮಾಡತ್ತಿದ್ದರೆ, ಇತ್ತ ವ್ಯಾಪಾರಿಗಳು ಫುಲ್ ಖುಷಿಯಾಗಿದಂತೂ ಸುಳ್ಳಲ್ಲ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…