Featured

ಬೆಂಗಳೂರು : ಭರ್ಜರಿ ಆಫರ್​ ನೊಂದಿಗೆ  18 ಜಟ್ಕಾ ಕಟ್ ಅಂಗಡಿಗಳು ಓಪನ್‌  – Vishwanews24

ಬೆಂಗಳೂರು : ಯುಗಾದಿ ಹಬ್ಬ ಮುಸ್ಲಿಂ ವ್ಯಾಪಾರಿಗಳಿಗೆ ಠಕ್ಕರ್ – ಭರ್ಜರಿ ಆಫರ್​ ನೊಂದಿಗೆ  18 ಜಟ್ಕಾ ಕಟ್ ಅಂಗಡಿಗಳು ಓಪನ್‌

ಬೆಂಗಳೂರು : ನಗರದಲ್ಲಿ ನಿನ್ನೆ ಭಕ್ತಿಭಾವದಿಂದ ಯುಗಾದಿ ಹಬ್ಬವನ್ನು ಆಚರಿಸಲಾಯಿತು. ಯುಗಾದಿ ಹಬ್ಬದ ಮಾರನೇ ದಿನ ಅಂದರೆ, ಚೈತ್ರ ಶುದ್ಧ ದ್ವಿತೀಯದಂದು ಹೊಸತೊಡಕು ಎಂದು ಆಚರಿಸಲು ಸಜ್ಜಾಗಿದ್ದಾರೆ.

ನಾನ್‌ವೆಜ್‌ ಪ್ರಿಯರು ಹೊಸ ತೊಡಕು ಸಂಭ್ರಮದಲ್ಲಿ ತೊಡಗಿದ್ದು ಮಾಂಸ ಖರೀದಿಗಾಗಿ ಬೆಳಗ್ಗೆ 6 ಗಂಟೆಯಿಂದಲೂ ಮಾಂಸದಂಗಡಿಗಳ ಎದುರು ಮುಗಿಬಿದ್ದಿದ್ದಾರೆ.

ಕುರಿ‌ಮಾಂಸ ಕಳೆದ ವರ್ಷಕ್ಕಿಂತ ಈ ಬಾರಿ ದುಬಾರಿ ಬೆಲೆಗೆ ಮಾರಾಟವಾಗುತ್ತಿದೆ. ಒಂದು ಕೆಜಿಗೆ 700 ರೂ ದರ ನಿಗದಿ ಮಾಡಲಾಗಿದೆ. ಕಳೆದ ಬಾರಿ ನಾಲ್ಕು ಜಟ್ಕಾ ಕಟ್ ಶಾಪ್​ಗಳನ್ನು ತೆರೆಯಲಾಗಿತ್ತು. ಆದರೆ ಈ ಬಾರಿ 18 ಜಟ್ಕಾ ಕಟ್ ಅಂಗಡಿಗಳು ಓಪನ್‌ ಆಗಿದ್ದು, ಅದರಲ್ಲಿ ಕಮ್ಮನಹಳ್ಳಿ, ಇಟ್ಟಮಡು, ದಾಸರಹಳ್ಳಿ, ಸಂಜಯ್ ನಗರ, ಗೆದ್ದಲಹಳ್ಳಿ, ಯಲಹಂಕ, ಇಂದಿರಾನಗರ, ಟ್ಯಾನರಿ ರಸ್ತೆ, ಹೊರಮಾವು, ಅನ್ನಪೂರ್ಣೇಶ್ವರಿನಗರ ತೆರೆಯಲಾಗಿದೆ ಎಂದು ವರದಿಯಾಗಿದೆ.

ಹಲಾಲ್ ಬಾಯ್ಕಾಟ್ ಅಭಿಯಾನದ ಹಿನ್ನೆಲೆ ರಾಜಸ್ಥಾನದ ಅಜ್ಮೇರ್ ನಿಂದ 200, ಬಾಸವನಬಾಗೇವಾಡಿ, ಮಧುಗಿರಿಯಿಂದ 400. ಒಟ್ಟು 600 ಕುರಿ ಮತ್ತು ಮೇಕೆಗಳುಬೆಂಗಳೂರಿಗೆ ಬಂದಿವೆ. ಅಷ್ಟೇ ಅಲ್ಲದೇ ವ್ಯಾಪಾರದ ಹಿತ ದೃಷ್ಟಿಯಿಂದ ಆನ್ಲೈನ್ ಮತ್ತು ಡೋರ್ ಡೆಲಿವರಿ ವ್ಯವಸ್ಥೆಕೂಡ ಕಲ್ಪಿಸಲಾಗಿದೆ.

2 ಕೆಜಿ ಮಟನ್, 2 ಕೆಜಿ ಚಿಕನ್, 6 ಮೊಟ್ಟೆ 1999 ರೂ ಕಾಂಬೋ ನೀಡಲಾಗುತ್ತಿದೆ. ಹಿಂದವೀ ಮೀಟ್ ಮಾರ್ಟ್ 1200 ಸಾವಿರ ಕೆಜಿ ಜಟ್ಕಾ ಕಟ್ ರೆಡಿ ಮಾಡಿದೆ. ಗುಡ್ಡೆ ಮಾಂಸ ಕೆಜಿ- 650, ಕೆಜಿ ಮಟನ್- 700, ಚಿಕನ್- 130 ರಿಂದ 140 ರುಪಾಯಿಗೆ ಮಾರಾಟ ಮಾಡಲಾಗುತ್ತಿದೆ. ರೇಟ್‌ ಎಷ್ಟೇ ಅಗಿದ್ದು ವರ್ಷಕ್ಕೆ ಒಮ್ಮೆ ಬರುವ ಹೊಸತೊಡಕಿನ ಹಬ್ಬವನ್ನು ಆಚರಣೆ ಮಾಡಲೇ ಬೇಕಾಗುತ್ತದೆ ಎಷ್ಟೆ ಇದ್ದರು ನಾವು ಹಬ್ಬ ಮಾಡುತ್ತೇವೆ ಎಂದು ಗ್ರಾಹಕರು ತಿಳಿಸುತ್ತಿದ್ದಾರೆ.

ಒಟ್ಟಾರೆಯಾಗಿ ಮಟನ್ ಬಿರಿಯಾನಿ, ಚಿಕನ್ ಬಿರಿಯಾನಿ, ಚಿಲ್ಲಿ ಚಿಕನ್, ಪೆಪ್ಪರ್ ಚಿಕನ್, ಫಿಶ್ ಕರಿ, ಫಿಶ್ ಫ್ರೈ, ತಲೆ ಕಾಲ್ ಮಾಂಸ, ಕಾಲ್ ಸೂಪ್ ಹೇಗಪ್ಪಾ ಮಾಡುವುದು ಎಂದು ನಾನ್ ವೆಜ್ ಪ್ರಿಯರು ಯೋಚನೆ ಮಾಡತ್ತಿದ್ದರೆ, ಇತ್ತ ವ್ಯಾಪಾರಿಗಳು ಫುಲ್ ಖುಷಿಯಾಗಿದಂತೂ ಸುಳ್ಳಲ್ಲ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

3 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

9 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

9 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

11 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

11 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

11 hours ago