ಬೆಂಗಳೂರು: ಪ್ರಯಾಣಿಕರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ನೈರುತ್ಯ ರೈಲು ಬೇಸಿಗೆ ರಜೆಯ ವಿಶೇಷ ರೈಲುಗಳನ್ನು ಓಡಿಸಲು ಮುಂದಾಗಿದೆ. ಎಸ್ಎಂವಿಟಿ (SMVT) ಬೆಂಗಳೂರು ಟು ಕೊಲ್ಲಂ ಎಕ್ಸ್ಪ್ರೆಸ್ ಮತ್ತು ಎಸ್ಎಂವಿಟಿ ಬೆಂಗಳೂರು ಟು ಮಂಗಳೂರಿಗೆ ವಿಶೇಷ ರೈಲುಗಳು ಸಂಚರಿಸಲಿವೆ. ಈ ಬಗ್ಗೆ ನೈರುತ್ಯ ರೈಲ್ವೆ ಇಲಾಖೆ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರು-ಮಂಗಳೂರು-ಕೊಲ್ಲಂಗೆ ವಿಶೇಷ ರೈಲುಗಳ ಸಮಯ, ದಿನಾಂಕ ಸೇರಿದಂತೆ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.
ವಿಶೇಷ ರೈಲುಗಳ ವಿವರ
ರೈಲು ಸಂಖ್ಯೆ 06585: ಎಸ್ಎಂವಿಟಿ ಬೆಂಗಳೂರು ಟು ಕೊಲ್ಲಂ ಎಕ್ಸ್ಪ್ರೆಸ್. ಏಪ್ರಿಲ್ 19 (ಶನಿವಾರ) ಮಧ್ಯಾಹ್ನ 3:50 ಗಂಟೆಗೆ ಹೊರಟು ಭಾನುವಾರ ಬೆಳಿಗ್ಗೆ 06:20 ಕೊಲ್ಲಂ ತಲುಪುತ್ತದೆ. ದಿನಕ್ಕೆ ಒಂದು ಸೇವೆ ಮಾತ್ರ ಇರಲಿದೆ.
ರೈಲು ಸಂಖ್ಯೆ 06586: ಕೊಲ್ಲಂ ಟು ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್. 20 ಏಪ್ರಿಲ್ (ಭಾನುವಾರ) ಸಂಜೆ 5:50 ಕ್ಕೆ ಹೊರಟು ಮರುದಿನ ಅಂದರೆ ಸೋಮವಾರ ಎಸ್ಎಂವಿಟಿ ಬೆಂಗಳೂರು ಬೆಳಿಗ್ಗೆ 08:35 ಕ್ಕೆ ತಲುಪಲಿದೆ. ದಿನಕ್ಕೆ ಒಂದು ಸೇವೆ ಮಾತ್ರ ಇರಲಿದೆ.
ಯಾವೆಲ್ಲಾ ಕೋಚ್ಗಳು ಲಭ್ಯ
1 ಎಸಿ ಟು ಟೈಯರ್ ಕೋಚ್, 1 ಎಸಿ ತ್ರೀ ಟೈಯರ್ ಕೋಚ್, 8 ಸ್ಲೀಪರ್ ಕ್ಲಾಸ್ ಕೋಚ್ಗಳು, 4 ಜನರಲ್ ಸೆಕೆಂಡ್ ಕ್ಲಾಸ್ ಕೋಚ್ಗಳು ಮತ್ತು 2 ಸೆಕೆಂಡ್ ಕ್ಲಾಸ್ ಕೋಚ್ಗಳು ಹೊಂದಿವೆ.
ಎಲ್ಲೆಲ್ಲಿ ನಿಲುಗಡೆ?
SMVT ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಪೋದನೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ, ಎರ್ನಾಕುಲಂ, ಕೊಟ್ಟಾಯಂ, ಚಂಗನಾಸ್ಸೆರಿ, ತಿರುವಲ್ಲಾ, ಚೆಂಗನ್ನೂರು, ಮಾವೇಲಿಕ್ಕರ, ಕಾಯಕುಲಂ ಹಾಗೂ ಕೊಲ್ಲಂ.
ಎಸ್ಎಂವಿಟಿ ಬೆಂಗಳೂರು-ಮಂಗಳೂರು ವಿಶೇಷ ರೈಲು
ಇದೇ ರೀತಿಯಾಗಿ ಎಸ್ಎಂವಿಟಿ ಬೆಂಗಳೂರು ಟು ಮಂಗಳೂರು ಜಂಕ್ಷನ್ ನಡುವೆ ವಿಶೇಷ ರೈಲುಗಳು ಸಂಚಸಿಲಿವೆ. ರೈಲು ಸಂಖ್ಯೆ 06579: SMVT ಬೆಂಗಳೂರು ಟು ಮಂಗಳೂರು ಜಂಕ್ಷನ್. ಏಪ್ರಿಲ್ 17 ರಂದು ರಾತ್ರಿ 11.55 ಕ್ಕೆ SMVT ಬೆಂಗಳೂರಿನಿಂದ ಹೊರಟು ಮರುದಿನ ಸಂಜೆ 4 ಗಂಟೆಗೆ ಮಂಗಳೂರು ಜಂಕ್ಷನ್ ತಲುಪುತ್ತದೆ.
ರೈಲು ಸಂಖ್ಯೆ 06580: ಮಂಗಳೂರು ಜಂಕ್ಷನ್ ಟು SMVT ಬೆಂಗಳೂರು. ಏಪ್ರಿಲ್ 20 ರಂದು ಮಧ್ಯಾಹ್ನ 2.10 ಕ್ಕೆ ಮಂಗಳೂರು ಜಂಕ್ಷನ್ನಿಂದ ಹೊರಟು ಮರುದಿನ ಬೆಳಿಗ್ಗೆ 7.30 ಕ್ಕೆ SMVT ಬೆಂಗಳೂರು ತಲುಪುತ್ತದೆ.
ಎಲ್ಲೆಲ್ಲಿ ನಿಲುಗಡೆ?
SMVT ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಪೋದನೂರು, ಪಾಲಕ್ಕಾಡ್, ತ್ರಿಶೂರ್, ಕೋಜಿಕೋಡ್, ವಡಕರ, ತಲಸ್ಸೆರಿ, ಕಣ್ಣೂರು, ಪಯ್ಯನೂರು, ಕಾಞಂಗಾಡ್, ಕಾಸರಗೋಡು ಹಾಗೂ ಮಂಗಳೂರು.
ಯಾವೆಲ್ಲಾ ಕೋಚ್ಗಳು ಲಭ್ಯ
1 ಪ್ರಥಮ ದರ್ಜೆ ಎಸಿ ಕೋಚ್, 2 ಎಸಿ ಟೂ-ಟೈರ್ ಕೋಚ್ಗಳು, 4 ಎಸಿ ತ್ರೀ-ಟೈರ್ ಕೋಚ್ಗಳು, 7 ಸ್ಲೀಪರ್ ಕ್ಲಾಸ್ ಕೋಚ್ಗಳು, 4 ಸಾಮಾನ್ಯ ದ್ವಿತೀಯ ದರ್ಜೆ ಕೋಚ್ಗಳು ಮತ್ತು 2 ಸಾಮಾನ್ಯ ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್ ಕೋಚ್ಗಳು ಹೊಂದಿವೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…