ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಾಂತಿಗ್ರಾಮ ಬಳಿ ನಡೆದಿದೆ.
ಒಂದು ಕೊಲೆ, ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿಯಾಗಿರುವ ಮನುವನ್ನು (23) ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದರು. ಈ ವೇಳೆ ಮೂತ್ರ ವಿಸರ್ಜನೆಗೆ ಅನುಮತಿ ನೀಡಬೇಕೆಂದು ಕೇಳಿದ್ದಾನೆ.
ಶಾಂತಿಗ್ರಾಮ ಬಳಿ ರಸ್ತೆ ಬದಿ ಜೀಪ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ಅವಕಾಶ ನೀಡಿದಾಗ ಪೊಲೀಸರ ಮೇಲೆಯೇ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಮನು ಯತ್ನಿಸಿದ್ದಾನೆ.
ಈ ಸಂದರ್ಭದಲ್ಲಿ ಹಾಸನ ನಗರಠಾಣೆ ಇನ್ಸ್ಪೆಕ್ಟರ್ ಮೋಹನ್ಕೃಷ್ಣ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಸಬ್ಇನ್ಸ್ಪೆಕ್ಟರ್ ಕುಮಾರ್ ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಬುಧವಾರ ನಸುಕಿನ ಜಾವ 2 ಗಂಟೆಗೆ ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ಕೆಎ 51 ಎಂವಿ 8912 ನಂಬರ್ನ ಸ್ವಿಫ್ಟ್ ಕಾರನ್ನು ಬಸ್ಸಿನ ಮುಂದೆ ಮನು ಅಡ್ಡ ಹಾಕಿ ನಿಲ್ಲಿಸಿದ್ದ. ಕಾರಿನಿಂದ ಇಳಿದ ಬಳಿಕ ಗಲಾಟೆ ಮಾಡಿ ಬಸ್ಸಿನ ಗ್ಲಾಸನ್ನು ಒಡೆದು ಹಾಕಿದ್ದ. ಪುಡಿ ರೌಡಿ ಮನುವಿನ ಹುಚ್ಚಾಟ ಬಸ್ಸಿನಲ್ಲಿದ್ದವರ ಮೊಬೈಲಿನಲ್ಲಿ ಸೆರೆಯಾಗಿತ್ತು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದ್ದಂತೆ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…