ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು ನಿರೀಕ್ಷಿತ ಬೆಂಗಳೂರು – ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ (ಟ್ರಯಲ್) ಸಂಚಾರವನ್ನು ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ ದಿಢೀರನೆ ರದ್ದುಗೊಳಿಸಿದೆ.
ಈ ಕುರಿತು ದಕ್ಷಿಣ ಪಶ್ಚಿಮ ರೈಲ್ವೆಯ ಮುಖ್ಯ ಪ್ರಯಾಣಿಕ ಸಂಚಾರ ವ್ಯವಸ್ಥಾಪಕರ (CPTM) ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ಸಂಬಂಧಪಟ್ಟ ಎಲ್ಲ ವಿಭಾಗಗಳಿಗೆ ಮಾಹಿತಿ ರವಾನಿಸಲಾಗಿದೆ. ಇದರಿಂದಾಗಿ ಟ್ರಯಲ್ ರನ್ಗೆ ಸಂಬಂಧಿಸಿದಂತೆ ನಿಗದಿಪಡಿಸಲಾಗಿದ್ದ ಎಲ್ಲ ಕಾರ್ಯಾಚರಣೆಗಳು ಮತ್ತು ಮರು ನಿಗದಿತ ನಿಲ್ದಾಣ ವ್ಯವಸ್ಥೆಗಳನ್ನು ಹಿಂತೆಗೆದುಕೊಳ್ಳಲಾಗಿದೆ.ದಕ್ಷಿಣ ಪಶ್ಚಿಮ ರೈಲ್ವೆಯ ಸಂದೇಶ ಸಂಖ್ಯೆ T.454/YPR-MAQ ವಂದೇ ಭಾರತ್/2026-27(241) ದಿನಾಂಕ 31.05.2026ರ ಪ್ರಕಾರ, ಜೂನ್ 3ರಂದು ಯಶವಂತಪುರ (YPR)–ಮಂಗಳೂರು (MAQ)–ಯಶವಂತಪುರ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಟ್ರಯಲ್ ರನ್ ನಡೆಸುವ ಪ್ರಸ್ತಾವನೆಯನ್ನು ಕೈಬಿಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ರೂಪಿಸಲಾಗಿದ್ದ ಯೋಜನೆಯ ಪ್ರಕಾರ, ಜೂನ್ 3ರಂದು ಬೆಳಗ್ಗೆ ಯಶವಂತಪುರದಿಂದ ಹೊರಟು ಮಂಗಳೂರು ತಲುಪಿ, ಪುನಃ ಬೆಂಗಳೂರಿಗೆ ಮರಳುವ ರೀತಿಯಲ್ಲಿ 8 ಬೋಗಿಗಳ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ ನೀಡಲು ಸಿದ್ಧತೆ ನಡೆಸಲಾಗಿತ್ತು. ರೈಲಿನ ವೇಗ, ಹಳಿ ಸಾಮರ್ಥ್ಯ, ಸುರಂಗ ಹಾಗೂ ಪ್ರಮುಖವಾಗಿ ಶಿರಾಡಿ ಘಾಟ್ ವಿಭಾಗದ ತಾಂತ್ರಿಕ ಅಂಶಗಳನ್ನು ಪರಿಶೀಲಿಸುವ ಉದ್ದೇಶದಿಂದ ಈ ಸಂಚಾರ ಮಹತ್ವ ಪಡೆದಿತ್ತು.
ರೈಲ್ವೆ ಇಲಾಖೆಯು ಟ್ರಯಲ್ ರನ್ ರದ್ದುಗೊಳಿಸುವಿಕೆಗೆ ಯಾವುದೇ ನಿಖರವಾದ ಕಾರಣವನ್ನು ಪ್ರಕಟಿಸಿಲ್ಲ. ಆದರೆ, ಅಗತ್ಯ ರೇಕ್ ಲಭ್ಯತೆ (ರೈಲು ಬೋಗಿಗಳು), ಕಾರ್ಯಾಚರಣಾ ಆದ್ಯತೆಗಳು ಹಾಗೂ ಇತರ ತಾಂತ್ರಿಕ ಕಾರಣಗಳು ಇದಕ್ಕೆ ಕಾರಣವಾಗಿರಬಹುದು ಎಂದು ಮೂಲಗಳು ತಿಳಿಸಿವೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…