Featured

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು – vishwanews24

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು

ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು ನಿರೀಕ್ಷಿತ ಬೆಂಗಳೂರು – ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ (ಟ್ರಯಲ್) ಸಂಚಾರವನ್ನು ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ ದಿಢೀರನೆ ರದ್ದುಗೊಳಿಸಿದೆ.

ಈ ಕುರಿತು ದಕ್ಷಿಣ ಪಶ್ಚಿಮ ರೈಲ್ವೆಯ ಮುಖ್ಯ ಪ್ರಯಾಣಿಕ ಸಂಚಾರ ವ್ಯವಸ್ಥಾಪಕರ (CPTM) ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ಸಂಬಂಧಪಟ್ಟ ಎಲ್ಲ ವಿಭಾಗಗಳಿಗೆ ಮಾಹಿತಿ ರವಾನಿಸಲಾಗಿದೆ. ಇದರಿಂದಾಗಿ ಟ್ರಯಲ್ ರನ್‌ಗೆ ಸಂಬಂಧಿಸಿದಂತೆ ನಿಗದಿಪಡಿಸಲಾಗಿದ್ದ ಎಲ್ಲ ಕಾರ್ಯಾಚರಣೆಗಳು ಮತ್ತು ಮರು ನಿಗದಿತ ನಿಲ್ದಾಣ ವ್ಯವಸ್ಥೆಗಳನ್ನು ಹಿಂತೆಗೆದುಕೊಳ್ಳಲಾಗಿದೆ.ದಕ್ಷಿಣ ಪಶ್ಚಿಮ ರೈಲ್ವೆಯ ಸಂದೇಶ ಸಂಖ್ಯೆ T.454/YPR-MAQ ವಂದೇ ಭಾರತ್/2026-27(241) ದಿನಾಂಕ 31.05.2026ರ ಪ್ರಕಾರ, ಜೂನ್ 3ರಂದು ಯಶವಂತಪುರ (YPR)–ಮಂಗಳೂರು (MAQ)–ಯಶವಂತಪುರ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಟ್ರಯಲ್ ರನ್ ನಡೆಸುವ ಪ್ರಸ್ತಾವನೆಯನ್ನು ಕೈಬಿಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ರೂಪಿಸಲಾಗಿದ್ದ ಯೋಜನೆಯ ಪ್ರಕಾರ, ಜೂನ್ 3ರಂದು ಬೆಳಗ್ಗೆ ಯಶವಂತಪುರದಿಂದ ಹೊರಟು ಮಂಗಳೂರು ತಲುಪಿ, ಪುನಃ ಬೆಂಗಳೂರಿಗೆ ಮರಳುವ ರೀತಿಯಲ್ಲಿ 8 ಬೋಗಿಗಳ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ ನೀಡಲು ಸಿದ್ಧತೆ ನಡೆಸಲಾಗಿತ್ತು. ರೈಲಿನ ವೇಗ, ಹಳಿ ಸಾಮರ್ಥ್ಯ, ಸುರಂಗ ಹಾಗೂ ಪ್ರಮುಖವಾಗಿ ಶಿರಾಡಿ ಘಾಟ್ ವಿಭಾಗದ ತಾಂತ್ರಿಕ ಅಂಶಗಳನ್ನು ಪರಿಶೀಲಿಸುವ ಉದ್ದೇಶದಿಂದ ಈ ಸಂಚಾರ ಮಹತ್ವ ಪಡೆದಿತ್ತು.

ರೈಲ್ವೆ ಇಲಾಖೆಯು ಟ್ರಯಲ್ ರನ್ ರದ್ದುಗೊಳಿಸುವಿಕೆಗೆ ಯಾವುದೇ ನಿಖರವಾದ ಕಾರಣವನ್ನು ಪ್ರಕಟಿಸಿಲ್ಲ. ಆದರೆ, ಅಗತ್ಯ ರೇಕ್ ಲಭ್ಯತೆ (ರೈಲು ಬೋಗಿಗಳು), ಕಾರ್ಯಾಚರಣಾ ಆದ್ಯತೆಗಳು ಹಾಗೂ ಇತರ ತಾಂತ್ರಿಕ ಕಾರಣಗಳು ಇದಕ್ಕೆ ಕಾರಣವಾಗಿರಬಹುದು ಎಂದು ಮೂಲಗಳು ತಿಳಿಸಿವೆ.

 

Vishwa News 24

Recent Posts

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ – vishwanews24

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…

41 minutes ago

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ – vishwanews24

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…

45 minutes ago

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ – vishwanews24

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…

59 minutes ago

ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ – vishwanews24

ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ ಕಾಪು : ಕಾರೊಂದು ರಸ್ತೆ ಬದಿಯ…

3 hours ago

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ  – vishwanews24

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ  ನವದೆಹಲಿ : ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದ…

3 hours ago

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

2 days ago