Featured

ಬೆಂಗಳೂರು – ಮಂಗಳೂರು ಹೆಚ್ಚುವರಿ ರೈಲಿಗಾಗಿ ಸಂಸದರಿಗೆ ಮನವಿ – vishwanews24

ಬೆಂಗಳೂರು – ಮಂಗಳೂರು ಹೆಚ್ಚುವರಿ ರೈಲಿಗಾಗಿ ಸಂಸದರಿಗೆ ಮನವಿ

ಮಂಗಳೂರು: ಬೆಂಗಳೂರು- ಮಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಪಶ್ಚಿಮ ಕರಾವಳಿ ರೈಲು ಯಾತ್ರಿ ಅಭಿವೃದ್ಧಿ ಸಮಿತಿಯು ದಕ್ಷಿಣ ಕನ್ನಡ ಸಂಸದರಿಗೆ ಮನವಿ ಮಾಡಿದೆ.

ಪಶ್ಚಿಮ ಕರಾವಳಿ ರೈಲು ಯಾತ್ರಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹನುಮಂತ ಕಾಮತ್ ಹಾಗೂ ಕಾರ್ಯದರ್ಶಿ ಅನಿಲ್ ಹೆಗ್ಡೆ ಜ.6ರಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಭೇಟಿಯಾಗಿ ಮಂಗಳೂರು ಭಾಗದ ರೈಲ್ವೆ ಸಂಬಂಧಿತ ವಿವಿಧ ಪ್ರಮುಖ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಕೆಲವು ದಿನಗಳಿಂದ ಬೆಂಗಳೂರು-ಕಣ್ಣೂರು ರೈಲು ನಿರಂತರವಾಗಿ ವಿಳಂಬವಾಗಿ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರೈಲಿನ ಸಮಯ ಪಾಲನೆ ಸುಧಾರಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿದರು.

ಪ್ರಸ್ತಾವಿತ ಮಂಗಳೂರು-ರಾಮೇಶ್ವರ ಸಾಪ್ತಾಹಿಕ ರೈಲನ್ನು ಶೀಘ್ರ ಆರಂಭಿಸಬೇಕು ಹಾಗೂ ಇದೇ ರೈಲಿನ ಬೋಗಿಗಳನ್ನು ಉಪಯೋಗಿಸಿ ವಾರಕ್ಕೆ ಒಂದು ಬಾರಿ ಮಂಗಳೂರು- ಭಾವನಗರ ರೈಲು ಸೇವೆಯನ್ನು ಪ್ರಾರಂಭಿಸಬೇಕೆಂದು ಸಂಸದರನ್ನು ಆಗ್ರಹಿಸಿದರು.

ಪ್ರಸ್ತಾವಿತ ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲನ್ನು ಆರಂಭಿಸುವಾಗ, ಈಗ ಬೆಂಗಳೂರು- ಮಂಗಳೂರು ನಡುವೆ ಸಂಚರಿಸುತ್ತಿರುವ ರೈಲುಗಳ ವೇಳಾಪಟ್ಟಿಯಲ್ಲಿ ಯಾವುದೇ ಮಾರ್ಪಾಡು ಮಾಡದೆ ಹಾಗೂ ಅವುಗಳ ಓಡಾಟಕ್ಕೆ ವ್ಯತ್ಯಯವಾಗದಂತೆ ಹೊಸ ರೈಲಿನ ವೇಳಾಪಟ್ಟಿಯನ್ನು ರೂಪಿಸಬೇಕೆಂದು ಸಮಿತಿ ಆಗ್ರಹಿಸಿದರು.

ಮಂಗಳೂರು ಸೆಂಟ್ರಲ್ ಮುಖಾಂತರ ಸಂಚರಿಸುತ್ತಿರುವ ಬೆಂಗಳೂರು-ಕಣ್ಣೂರು ಹಾಗೂ ಬೆಂಗಳೂರು- ಮುರುಡೇಶ್ವರ ರೈಲುಗಳ ಇಂದಿನ ಮಾರ್ಗ ಮತ್ತು ಪ್ರಯಾಣಿಕ ಸ್ನೇಹಿ ವೇಳಾಪಟ್ಟಿಯನ್ನು ಯಾವುದೇ ಕಾರಣಕ್ಕೂ ಬದಲಾಯಿಸಬಾರದೆಂದು ಸಂಸದರಿಗೆ ವಿನಂತಿಸಿದರು.

ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ ಆಮೆಗತಿಯಲ್ಲಿ ಸಾಗುತ್ತಿರುವ ಹೊಸ ಸ್ಟೇಬ್ಲಿಂಗ್ ಲೈನ್ ಕಾಮಗಾರಿ ಹಾಗೂ ಮಂಗಳೂರು ಸೆಂಟ್ರಲ್-ಮಂಗಳೂರು ಜಂಕ್ಷನ್ ನಡುವೆ ಬಾಕಿ ಇರುವ 1.6ಕಿ ಮೀ ಹೊಸ ಜೋಡಿ ಹಳಿಗಳ ನಿರ್ಮಾಣದ ವಿಚಾರವನ್ನು ಸಂಸದರ ಗಮನಕ್ಕೆ ತಂದಾಗ, ಅವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.

*ವಿಶ್ವ ದರ್ಜೆಯ ನಿಲ್ದಾಣ ನಿರ್ಮಾಣ ಶೀಘ್ರ ಆರಂಭ: ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಪ್ರಸ್ತಾವಿತ ಮಂಗಳೂರು ಸೆಂಟ್ರಲ್ ನಿಲ್ದಾಣವನ್ನು ವಿಶ್ವ ದರ್ಜೆ ಮಟ್ಟದ ನಿಲ್ದಾಣವಾಗಿ ಅಭಿವೃದ್ಧಿ ಪಡಿಸುವ ಕಾಮಗಾರಿ ಶೀಘ್ರವೇ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು ಎಂದು ಮುಂಬೈ ರೈಲು ಯಾತ್ರಿ ಸಂಘದ ಕಾರ್ಯಕಾರಿ ಕಾರ್ಯದರ್ಶಿ ಒಲಿವರ್ ಡಿ ಸೋಜ ತಿಳಿಸಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

3 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago