ಬೆಂಗಳೂರು : ಮದರಸಾಗಳಿಗಾಗಿ ಪ್ರತ್ಯೇಕ ಪಠ್ಯಕ್ರಮ ಪರಿಚಯಿಸುವ ಚಿಂತನೆ ರಾಜ್ಯ ಸರಕಾರದ ಮುಂದೆ ಸದ್ಯಕ್ಕೆ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಸಾಮಾನ್ಯ ಶಾಲೆಗಳಲ್ಲಿ ಕಲಿಸುವಂತಹ ಗಣಿತ, ವಿಜ್ಞಾನ, ಇಂಗ್ಲಿಷ್ ಮತ್ತಿತರ ವಿಷಯಗಳ ಕಲಿಕೆಗೆ ಆಸಕ್ತರಾಗಿದ್ದಾರೆ. ಆ ಮಕ್ಕಳ ಪೋಷಕರು ಕೂಡ ಈ ನಿಟ್ಟಿನಲ್ಲಿ ಒತ್ತಾಸೆ ಹೊಂದಿದ್ದಾರೆ. ಇದೇ ಕಾರಣಕ್ಕೆ ತಮ್ಮ ಮಕ್ಕಳನ್ನು ಸಾಮಾನ್ಯ ಶಾಲೆಗಳಿಗೆ ಕಳುಹಿಸುತ್ತಿರುವುದನ್ನು ಕಾಣಬಹುದು. ಇದಕ್ಕೆ ಪರ್ಯಾಯವಾಗಿ ಉರ್ದು ಶಾಲೆಗಳಲ್ಲಿ ಹಾಜರಾತಿ ಗಣನೀಯವಾಗಿ ಇಳಿಕೆಯಾಗಿದೆ’ ಎಂದರು.
ಉತ್ತರ ಪ್ರದೇಶದಲ್ಲಿ ಮದರಸಾಗಳಿಗೆ ಪ್ರತ್ಯೇಕ ಪಠ್ಯಕ್ರಮ ಪರಿಚಯಿಸಲು ಅಲ್ಲಿನ ಸರ್ಕಾರ ಮುಂದಾಗಿದೆ. ಸದ್ಯಕ್ಕೆ ನಮ್ಮಲ್ಲಿ ಆ ರೀತಿಯ ಚಿಂತನೆ ಅಥವಾ ಪ್ರಸ್ತಾವನೆ ಇಲ್ಲ. ಆದರೆ, ಮದರಸಾಗಳಿಗೆ ತೆರಳುವ ಮಕ್ಕಳು ಸಾಮಾನ್ಯ ಶಾಲೆಗಳಿಗೆ ತೆರಳುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿದರು.
ಆಗಸ್ಟ್ 9ರಿಂದ 17ರವರೆಗೆ ಪ್ರತಿ ಶಾಲೆ ಮತ್ತು ಮನೆಗಳ ಮೇಲೆ ರಾಷ್ಟ್ರ ಧ್ವಜಾರೋಹಣ ಮದರಸಾಗಳಿಗೂ ಅನ್ವಯ ಆಗುವಂತೆ ಹೊರಡಿಸಿರುವ ಆದೇಶಕ್ಕೆ ಪ್ರತಿಕ್ರಿಯಿಸಿ, “ಮದರಸಾಗಳೂ ದೇಶದಲ್ಲೇ ಇವೆ. ಈ ರಾಷ್ಟ್ರದ ಧ್ವಜವನ್ನು ಉಳಿದ ಶಾಲೆಗಳಂತೆಯೇ ಮದರಸಾಗಳ ಮೇಲೂ ರಾರಾಜಿಸಬೇಕು. ಆ ಸಮುದಾಯದ ಮುಖಂಡರೂ ಕೂಡ ಈ ಆಶಯ ವ್ಯಕ್ತಪಡಿಸಿದ್ದಾರೆ’ ಎಂದರು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…