Featured

ಬೆಂಗಳೂರು: ಮದುವೆಯ ಭರವಸೆ ನೀಡಿ ಯುವತಿಯ ಮತಾಂತರ : ಮತಾಂತರ ನಿಷೇಧ ಕಾಯ್ದೆ ಜಾರಿ ಬಳಿಕ ರಾಜ್ಯದಲ್ಲಿ ಮೊದಲ ಎಫ್‌ಐಆರ್‌ ದಾಖಲು- Vishwanews24

ಬೆಂಗಳೂರು: ಮದುವೆಯಾಗುವ ಭರವಸೆ ನೀಡಿ ಯುವತಿಯ ಮತಾಂತರ : ಮತಾಂತರ ನಿಷೇಧ ಕಾಯ್ದೆ ಜಾರಿ ಬಳಿಕ ರಾಜ್ಯದಲ್ಲಿ ಮೊದಲ ಎಫ್‌ಐಆರ್‌ ದಾಖಲು

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಜಾರಿಯಾದ ನಂತರ ರಾಜ್ಯದಲ್ಲಿ ಮೊದಲ ಪಕರಣ ದಾಖಲಾಗಿದೆ. ಮದುವೆಯಾಗುವ ಭರವಸೆ ನೀಡಿ 18 ವರ್ಷದ ಉತ್ತರ ಪದೇಶದ ಯುವತಿಯನ್ನು ಮತಾಂತರ ಮಾಡಲಾಗಿದ್ದು ಸೈಯದ್ ಮುಯಿನ್ ಎಂಬಾತನ ಮೇಲೆ ಯಶವಂತಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಯುವತಿಯ ಕುಟುಂಬದವರು ಮೂಲತಃ ಉತ್ತರ ಪುದೇಶದ ಗೋರಖ್‌ಪುರದವರು. ಯುವತಿಯ ತಂದೆ ಪೇಂಟಿಂಗ್ ಕೆಲಸ ಮಾಡುತ್ತಿದ್ದು, ತಾಯಿ ಗೃಹಿಣಿಯಾಗಿದ್ದಾರೆ. ಇಬ್ಬರು ಸಹೋದರಿಯರು ಓರ್ವ ಸಹೋದರನೊಂದಿಗೆ ‘ಯುವತಿ ಯಶವಂತಪುರ ವ್ಯಾಪ್ತಿಯ ಬಿ.ಕೆ.ನಗರದಲ್ಲಿ ಕಳೆದ 15 ವರ್ಷಗಳಿಂದ ವಾಸವಿದ್ದಳು.

ಮಗಳು ಅನ್ಯ ಧರ್ಮದ ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂಬ ಶಂಕೆ ಮೇಲೆ ಆರು ತಿಂಗಳ ಹಿಂದೆ ಮಗಳಿಗೆ ಪೋಷಕರು ಬುದ್ಧಿ ಹೇಳಿದ್ದರು. ಆದರೆ ಕಳೆದ ಅ 5ರಂದು ಅಂಗಡಿಗೆ ಹೋಗಿಬರುವುದಾಗಿ ಹೋಗಿದ್ದ ಯುವತಿ ಮನೆಗೆ ವಾಪಸ್ ಬಂದಿರಲಿಲ್ಲ.

ಮಂಡ್ಯದ ಐದು ರೂಪಾಯಿ ವೈದ್ಯ ಖ್ಯಾತಿಯ ಶಂಕರೇಗೌಡರಿಗೆ ‘ಇಂಡಿಯನ್ ಆಫ್‌ ದಿ ಇಯರ್’ ಪ್ರಶಸ್ತಿ – Vishwanews24

ಈ ಹಿನ್ನೆಲೆ ಯಶವಂತಪುರ ಠಾಣೆಯಲ್ಲಿ ಯುವತಿಯ ಕುಟುಂಬಸ್ಥರು ನಾಪತ್ತೆ ಪುಕರಣ ದಾಖಲಿದ್ದರು. ಆದರೆ ವಾರದ ಬಳಿಕ ಬುರ್ಖಾ ಧರಿಸಿಕೊಂಡು ಯುವತಿ ಠಾಣೆಗೆ ಆಗಮಿಸಿದ್ದಳು. ಆದರೆ ಆದಾಗಲೇ ಯುವತಿ ಮತಾಂತರಗೊಂಡಿದ್ದು, ಆಕೆಯನ್ನು ಮದುವೆಯಾಗುವುದಾಗಿ ಮುಯಿನ್ ಎಂಬಾತ ಪೊಲೀಸ್ ಠಾಣೆಗೆ ಕರೆತಂದಿದ್ದ. ಮಗಳ ನಡೆ ಕಂಡು ಗಾಬರಿಗೊಂಡ ಪೋಷಕರು ಮುಯೀನ್ ವಿರುದ್ಧ ಮದುವೆಯ ಭರವಸೆ ಕೊಟ್ಟು ಮತಾಂತರ ಮಾಡಿದ್ದಾನೆ ಎಂದು ಆರೋಪಿಸಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದ್ದಾರೆ.

ಆರೋಪಿ ಮುಯೀನ್ ಮತ್ತು ಯುವತಿ ಪ್ರೀತಿಸುತ್ತಿದ್ದರು. ಮದುವೆಯಾಗಬೇಕಾದರೆ ಮತಾಂತರವಾಗಬೇಕು ಎಂದು ಮುಯೀನ್ ಯುವತಿಯ ಮೇಲೆ ಒತ್ತಡ ಹೇರಿದ್ದನಂತೆ. ಮುಯಿನ್ ಮಾತು ನಂಬಿ ಆತನ ಜೊತೆ ಹೋಗಿದ್ದ ಯುವತಿಯನ್ನು ಕಾನೂನು ಬಾಹಿರವಾಗಿ ಮಸೀದಿಯೊಂದರಲ್ಲಿ ಮತಾಂತರ ಮಾಡಲಾಗಿದೆ ಎಂದು ಯುವತಿಯ ಪೋಷಕರು ದೂರಿದ್ದಾರೆ.

ಸದ್ಯ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಮತಾಂತರ ಕಾಯ್ದೆ ಅಡಿ ಪುಕರಣ ದಾಖಲಾಗಿದೆ. ಮತಾಂತರ ನಿಷೇಧ ಕಾಯ್ದೆಯ ಅನ್ವಯ ಮತಾಂತರ ಪುಕ್ರಿಯೆಗೆ ಹಲವು ನಿಯಮಗಳನ್ನು ವಿಧಿಸಲಾಗಿದೆ. ಮತಾಂತರವಾಗುವ ವ್ಯಕ್ತಿ ಮೊದಲು ಡಿಸಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಬಳಿಕ ಡಿಸಿ ಆ ವ್ಯಕ್ತಿಯ ಪೋಷಕರು ಹಾಗೂ ಆಪ್ತರ ಅಭಿಪ್ರಾಯ ಪಡೆದು 30 ದಿನಗಳ ಗಡುವು ನೀಡುತ್ತಾರೆ.

ಜನತಾದಳ (ಜಾತ್ಯತೀತ) ಪಕ್ಷದ “ಜಿಲ್ಲಾ ವಕ್ತಾರರಾಗಿ ಶ್ರೀ ಶ್ರೀಕಾಂತ್ ಹೆಬ್ರಿ ನೇಮಕ- Vishwanews24

ಯಾವುದೇ ಒತ್ತಡವಿಲ್ಲದ ತಮ್ಮಿಷ್ಟದಂತೆ ಮತಾಂತರವಾಗುತ್ತಿದ್ದರೆ ಜಿಲ್ಲಾಧಿಕಾರಿ ಅನುಮತಿ ನೀಡುತ್ತಾರೆ. ಯಾವುದೇ ಒತ್ತಡ ಅಥವಾ ಆಮಿಷಕ್ಕೆ ಬಲಿಯಾಗಿ ಮತಾಂತರವಾದರೆ ಮತಾಂತರವಾಗಲು ಸಹಾಯ ಮಾಡುವ ಎಲ್ಲರ ವ ಮೇಲೆ ಎಫ್‌ಐಆರ್‌ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಈಗ ಇದೇ ಕಾಯ್ದೆಯಂತೆ ಮುಯೀನ್ ಬಂಧನವಾಗಿದ್ದು ಆತನಿಗೆ ಸಹಾಯ ಮಾಡಿದವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದ್ದು, ತನಿಖೆ ಮುಂದುವರೆಯುತ್ತಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

4 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

5 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago