ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ನಗರದಲ್ಲಿ ನಾಲ್ಕು ವರ್ಷಗಳ ಬಳಿಕ ಅತ್ಯಧಿಕ ಮಳೆ ದಾಖಲಾಗಿದ್ದು, ಈ ವರ್ಷ ವಾಡಿಕೆಗಿಂತ ಹೆಚ್ಚು ವರ್ಷಧಾರೆಯಾಗಿದೆ. ಅಕ್ಟೊಬರ್ 15 ರಂದು 281 ಮೀ.ಮೀ ಮಳೆಯಾಗಿತ್ತು. ನಿನ್ನೆ ವಾಡಿಕೆಗಿಂತ ಶೇ.60ರಷ್ಟು ಹೆಚ್ಚು ಮಳೆ ಸುರಿದಿತ್ತು. ಇದು ಬೆಂಗಳೂರಿನಲ್ಲಿ 2017ರ ಬಳಿಕ ಸುರಿದ ಅಧಿಕ ಮಳೆಯಾಗಿದೆ.
ನಿನ್ನೆ ಮಲ್ಲೇಶ್ವರಂ, ಯಶವಂತಪುರ, ಗೋರಗುಂಟೆ ಪಾಳ್ಯ, ರಾಜಕುಮಾರ್ ಸಮಾಧಿ, ಇಸ್ಕಾನ್ ಸೇರಿದಂತೆ ಹಲವೆಡೆ ಬೆಳಗಿನ ಜಾವವೇ ಮಳೆ ಆರಂಭವಾಗಿತ್ತು. ಮಳೆಯಿಂದ ವಾಹನ ಸವಾರರು ಪರದಾಟ ನಡೆಸಿದರು. ಇಂದು ಮಳೆರಾಯ ಸ್ವಲ್ಪ ಮಟ್ಟಿನ ಬಿಡುವು ನೀಡಿದ್ದು, ಮುಂದಿನ ವಾರ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಹಿಂಗಾರು ಮಾರುತಗಳಿಂದ ಅಕ್ಟೋಬರ್ ಕೊನೆಯ ವಾರದ ಹೊತ್ತಿಗೆ ಮತ್ತೆ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಎಂ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆ ಸ್ಥಳೀಯ ಶಾಸಕರಾದ ಸತೀಶ್ ರೆಡ್ಡಿ, ಮುಖ್ಯ ಕಾರ್ಯದರ್ಶಿಗಳಾದ ರವಿಕುಮಾರ್, ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ಗೌರವ್ ಗುಪ್ತ, ಜಲಮಂಡಳಿ ಅಧ್ಯಕ್ಷರಾದ ಜಯರಾಮ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…