Featured

ಬೆಂಗಳೂರು: ಮಳೆ ಬೆನ್ನಲ್ಲೇ ಡೆಂಗ್ಯೂ ಪ್ರಕರಣ ಹೆಚ್ಚಳ – vishwanews24

ಬೆಂಗಳೂರು: ಮಳೆ ಬೆನ್ನಲ್ಲೇ ಡೆಂಗ್ಯೂ ಪ್ರಕರಣ ಹೆಚ್ಚಳ:

ಬೆಂಗಳೂರು: ಮಳೆ ಶುರುವಾದರೆ ಸಾಕು ಇದರ ಜತೆಗೆ ಸೊಳ್ಳೆಗಳ ಕಾಟವೂ ಹೆಚ್ಚಲಿದೆ. ಇದೇ ಋತುವಿನಲ್ಲಿ ಡೆಂಗ್ಯೂ ಜ್ವರ ಹೆಚ್ಚಳ ಆಗುವುದರಿಂದ ಎಚ್ಚರ ವಹಿಸುವುದು ಅತಿ ಅವಶ್ಯಕ. ಸದ್ಯ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡೆಂಗ್ಯೂ ಭೀತಿ ಹೆಚ್ಚಾಗಿದೆ. ಬೆಂಗಳೂರಿನ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಗೂ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. ನಾಲ್ಕು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡು, ಡೆಂಗ್ಯೂ ಧೃಡಪಟ್ಟಿದೆ.

ಹವಾಮಾನ ವೈಪರೀತ್ಯ ಮತ್ತು ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದೆ. 2022ರಲ್ಲಿ ರಾಜ್ಯದಲ್ಲಿ 7,317 ಡೆಂಗ್ಯೂ ಜ್ವರ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ ನಾಲ್ವರು ಮೃತಪಟ್ಟಿದ್ದರು. 2023ರಲ್ಲಿ 2003 ಪ್ರಕರಣಗಳು ವರದಿಯಾಗಿದ್ದವು. 2024ರಲ್ಲಿ ಈ ವರೆಗೆ (ಜೂನ್‌) 85,365 ಶಂಕಿತವಾಗಿದ್ದು, ಇದರಲ್ಲಿ 37,144 ಮಂದಿಯ ರಕ್ತ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಆ ಪ್ರಕಾರ 3,957 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಬೆಂಗಳೂರಲ್ಲಿ 1230 ಮಂದಿಗೆ ಡೆಂಗ್ಯೂ ಜ್ವರ ಕಂಡು ಬಂದಿದೆ. ಈವರೆಗೆ ಡೆಂಗ್ಯೂನಿಂದ ಮೃತಪಟ್ಟ ವರದಿ ಆಗಿಲ್ಲ.

ಡೆಂಗ್ಯೂ ಹೇಗೆ ಹರಡುತ್ತದೆ?

ಡೆಂಗ್ಯೂ ಜ್ವರ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು ಆಗಿದೆ. ಇದು ಈಡಿಪಸ್‌ ಎಂಬ ಹೆಣ್ಣು ಸೊಳ್ಳೆಗಳ ಕಡಿತದಿಂದ ಹರಡುತ್ತದೆ. ಸೊಳ್ಳೆ ಕಚ್ಚಿದ 4-7 ದಿನಗಳ ನಂತರ ರೋಗ ಲಕ್ಷಣಗಳು ಸಾಮಾನ್ಯವಾಗಿ ಕಂಡು ಬರುತ್ತವೆ. ಇದರ ಪ್ರಭಾವ 10 ದಿನಗಳವರೆಗೆ ಇರುತ್ತದೆ. ಹೀಗಾಗಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು ಉತ್ತಮವಾಗಿದೆ.

ಡೆಂಗ್ಯೂ ಜ್ವರ ತಲೆನೋವಿನಂತಹ ರೋಗಲಕ್ಷಣಗಳನ್ನು ಉಂಟು ಮಾಡಬಹುದು. ಡೆಂಗ್ಯೂವನ್ನು ಹೆಮರಾಜಿಕ್ ಜ್ವರ ಎಂದೂ ಕರೆಯಲಾಗುತ್ತದೆ. ಡೆಂಗ್ಯೂ ಜ್ವರದ ತೀವ್ರ ಸ್ವರೂಪವು ತೀವ್ರ ರಕ್ತಸ್ರಾವ, ರಕ್ತದೊತ್ತಡ ಹಾಗೂ ರಕ್ತಕಣಗಳ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿ ವ್ಯಕ್ತಿಯ ಸಾವಿಗೂ ಕಾರಣವಾಗಬಹುದು. ಅಧಿಕ ಜ್ವರ, ತೀವ್ರ ತಲೆನೋವು, ವಾಂತಿ, ದೇಹದ ವಿವಿಧ ಭಾಗಗಳಲ್ಲಿ ದದ್ದುಗಳು, ಗ್ರಂಥಿಗಳಲ್ಲಿ ಊತ, ಮೂಳೆ ಮತ್ತು ಕೀಲು ನೋವು, ರಕ್ತಸ್ರಾವವಾಗವುದು ರೋಗ ಲಕ್ಷಣಗಳಾಗಿವೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

5 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

5 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

5 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

6 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago