ಬೆಂಗಳೂರು :ಮಹಾಲಕ್ಷ್ಮೀ ಕೊಲೆ ಪ್ರಕರಣ – ಕೊಲೆಗಾರ ಯಾರೆಂದು ಗೊತ್ತಾಗಿದೆ, ಶೀಘ್ರದಲ್ಲೇ ಬಂಧಿಸಲಾಗುವುದು : ಪೊಲೀಸ್ ಕಮಿಷನರ್ – vishwanews24
ಬೆಂಗಳೂರು ಮಹಾಲಕ್ಷ್ಮೀ ಕೊಲೆ ಆರೋಪಿಯ ಸುಳಿವು ನೀಡಿದ ಪೊಲೀಸ್ ಕಮಿಷನರ್
ಬೆಂಗಳೂರು: ವೈಯಾಲಿಕಾವಲ್ ಮಹಾಲಕ್ಷ್ಮಿ ಕೊಲೆಗಾರ ಯಾರೆಂದು ಗೊತ್ತಾಗಿದೆ, ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿಕೆ ನೀಡಿದ್ದಾರೆ.
ಘಟನೆಯ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೃತ್ಯವೆಸಗಿರುವ ವ್ಯಕಿ ಯಾರೆಂದು ತಿಳಿದು ಬಂದಿದೆ. ಆರೋಪಿ ಹೊರ ರಾಜ್ಯದವನಾಗಿದ್ದು ಬೆಂಗಳೂರಿನಲ್ಲಿ ವಾಸವಾಗಿದ್ದ. ಶೀಘ್ರದಲ್ಲಿ ಆತನನ್ನು ಬಂಧನ ಮಾಡಿ ವಿಚಾರಣೆಗೆ ಒಳಪಡಿಸುತ್ತೇವೆ. ನಂತರ ಉಳಿದ ವಿಚಾರಗಳ ಬಗ್ಗೆ ಮಾಹಿತಿ ನೀಡುತ್ತೇವೆ ಎಂದರು.
