ಬೆಂಗಳೂರು: ಡೆಲಿವರಿ ತಡವಾಗಿದ್ದನ್ನು ಪ್ರಶ್ನಿಸಿದ ಮಹಿಳೆಯ ಮೂಗಿಗೆ ಪಂಚ್ ಮಾಡಿದ್ದ ಜೊಮ್ಯಾಟೋ ಬಾಯ್ ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ
ಡೆಲಿವರಿ ತಡವಾಗಿದ್ದಕ್ಕೆ ಮಹಿಳೆ ಮತ್ತು ಜೊಮ್ಯಾಟೋ ಬಾಯ್ ನಡುವೆ ವಾಗ್ವಾದ ನಡೆದು ಆತ ಮಹಿಳೆಯ ಮೂಗಿಗೆ ಪಂಚ್ ಮಾಡಿದ್ದರು. ಈ ಸಂಬಂಧ ಡೆಲಿವರಿ ಬಾಯ್ ಕಾಮರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ಸ್ಟಾಗ್ರಾಮ್ ಬ್ಯೂಟಿ ಇನ್ಫ್ಲುಯೆನ್ಸರ್ ಆಗಿರುವ ಮಹಿಳೆ ಹಿತೇಶಾ ಚಂದ್ರಾಣಿ ತನಗಾದ ಹಲ್ಲೆಯ ವಿಡಿಯೋ ಮಾಡಿ ಘಟನೆಯನ್ನು ವಿವರಿಸಿದ್ದಾರೆ.
ಮಂಗಳೂರು : ನಿವೃತ್ತ ಪೊಲೀಸ್ ಅಧಿಕಾರಿ ಖಾತೆಯಿಂದ 6 ಲಕ್ಷ ಲಪಟಾಯಿಸಿದ ಖದೀಮರು -Vishwanews24
ತಾನು ಜೊಮ್ಯಾಟೋದಲ್ಲಿ ಆರ್ಡರ್ ಮಾಡಿದ್ದ ಆಹಾರದ ಡೆಲಿವರಿ ತಡವಾಗಿದ್ದಕ್ಕೆ ಜೊಮ್ಯಾಟೋ ಡೆಲಿವರಿ ಬಾಯ್ ನ್ನು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೇ ತಡವಾಗಿದ್ದಕ್ಕಾಗಿ ಕಾರಣ ತಿಳಿಯಲು ಜೊಮ್ಯಾಟೋ ಕಾರ್ಯನಿರ್ವಾಹಕರೊಂದಿಗೆ ಮಾತನಾಡುತ್ತಿದ್ದಾಗ ಡೆಲಿವರಿ ಬಂದಿದ್ದರಿಂದ ಆತನಿಗೆ ಕಾಯುವುದಕ್ಕೆ ಅಥವಾ ಆರ್ಡರ್ ನ್ನು ವಾಪಸ್ ತೆಗೆದುಕೊಂಡು ಹೋಗುವುದಕ್ಕೆ ಸೂಚಿಸಿದ್ದಾರೆ. ಆದರೆ ಆರ್ಡರ್ ನ್ನು ವಾಪಸ್ ತೆಗೆದುಕೊಂಡು ಹೋಗಲು ಡೆಲಿವರಿ ಬಾಯ್ ನಿರಾಕರಿಸಿ, ನಾನೇನು ನಿಮ್ಮ ಗುಲಾಮನೇ ಎಂದು ಪ್ರಶ್ನಿಸಿದ್ದಾನೆ. ಏರು ಧ್ವನಿಯಲ್ಲಿ ಆತ ಮಾತನಾಡಿದ್ದರಿಂದ ಬಾಗಿಲು ಹಾಕಲು ಯತ್ನಿಸಿದಾಗ ಒಳ ನುಗ್ಗಿ ಟೇಬಲ್ ಮೇಲಿದ್ದ ಆರ್ಡರ್ ನ್ನು ಕಸಿದುಕೊಂಡು ಮೂಗಿಗೆ ಪಂಚ್ ಮಾಡಿ ಹಲ್ಲೆ ಮಾಡಿದ್ದಾನೆ ಎಂದು ಮಹಿಳೆ ವಿಡಿಯೋದಲ್ಲಿ ಆರೋಪಿಸಿದ್ದಾರೆ.
ಸುರೇಶ್ ಅಂಗಡಿ ತಾಯಿ ವಿಧಿವಶ -Vishwanews24
ತನ್ನ ಮೂಗು ಮುರಿದಿದ್ದು, ವೈದ್ಯರು ಶಸ್ತ್ರಚಿಕಿತ್ಸೆಗೊಳಪಡಬೇಕೆಂದು ಹೇಳುತ್ತಿದ್ದಾರೆ ಎಂದು ಮಹಿಳೆ ತಿಳಿಸಿದ್ದಾರೆ. ಜೊಮ್ಯಾಟೋ ಈ ಮಹಿಳೆಯ ವಿಡಿಯೋಗೆ ಪ್ರತಿಕ್ರಿಯೆ ನೀಡಿದ್ದು ಪೊಲೀಸ್ ತನಿಖೆ ಹಾಗೂ ವೈದ್ಯಕೀಯ ನೆರವು ನೀಡುವ ಭರವಸೆ ನೀಡಿದೆ.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…