ಬೆಂಗಳೂರು: ಹೊಸ ರೂಪಾಂತರಿತ ಕೋವಿಡ್ ಸೋಂಕಿನ ಆತಂಕ ಹೆಚ್ಚುತ್ತಿರುವ ಸಮಯದಲ್ಲೇ ಭಾರತಕ್ಕೆ ಆಗಮಿಸಿರುವ ಆರು ಜನರಲ್ಲಿ ಬ್ರಿಟನ್ ರೂಪಾಂತರಿತ ಕೋವಿಡ್ ಸೋಂಕು ಕಾಣಿಸಿಕೊಂಡಿದೆ ಎಂದು ವರದಿ ತಿಳಿಸಿದೆ.
ಅದರಲ್ಲೂ ಬೆಂಗಳೂರಿಗೆ ಆಗಮಿಸಿರುವ ಮೂವರಲ್ಲಿ ಈ ಕೋವಿಡ್ ಸೋಂಕು ಕಾಣಿಸಿಕಂಡಿದೆ. ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ನಿಮ್ಹಾನ್ಸ್ ನಲ್ಲಿ ನಡೆದ ವಂಶವಾಹಿನಿ ಪರೀಕ್ಷೆಯಿಂದ ಮೂವರಿಗೆ ರೂಪಾಂತರ ಸೋಂಕು ತಗುಲಿರುವುದು ದೃಢಪಟ್ಟಿರುವುದು. ಈ ಮೂವರು ಪ್ರಯಾಣಿಕರನ್ನು ಆಸ್ಪತ್ರೆಯ ಐಸೋಲೇಷನ್ ವಾರ್ಡನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಭಾರತದಲ್ಲಿ ಹೊಸ ಮಾದರಿಯ ಕೊರೊನಾ ವೈರಸ್ ಪತ್ತೆಯಾಗಿರುವುದು ಇದೇ ಮೊದಲು.ಆರು ಸೋಂಕಿತರ ಪೈಕಿ ಬೆಂಗಳೂರಿನಲ್ಲೇ ಮೂವರಿದ್ದಾರೆ. ಎರಡು ಪ್ರಕರಣಗಳು ಹೈದರಾಬಾದ್ನಲ್ಲಿ, ಒಂದು ಪ್ರಕರಣ ಪುಣೆಯಲ್ಲಿ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಈ ವೈರಸ್ ಈಗಿನ ಕೊರೊನಾ ವೈರಸ್ಗಿಂತಲೂ ಶೇಕಡಾ 70ರಷ್ಟು ಹೆಚ್ಚು ಸಾಂಕ್ರಾಮಿಕಗೊಳ್ಳುವ ಶಕ್ತಿ ಹೊಂದಿದೆ ಎಂದು ಹೇಳಲಾಗಿದೆ. ಸದ್ಯ ಇದು ಬ್ರಿಟನ್ನಲ್ಲಿ ವ್ಯಾಪಕಗೊಂಡಿದ್ದು, ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ ಎಂದು ಬ್ರಿಟನ್ ಸರ್ಕಾರ ಹೇಳಿದೆ..
ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…
ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…
ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…
ಉಡುಪಿ : ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…