ಬೆಂಗಳೂರು : ನಮ್ಮ ಮೆಟ್ರೋ ನಿರ್ಮಾಣ ಕಾರ್ಯದಲ್ಲಿ ಸುರಕ್ಷತಾ ಲೋಪಕ್ಕೆ ಮತ್ತೊಂದು ದುರಂತ ಸಂಭವಿಸಿದೆ. ಯೋಜನೆಗಾಗಿ ಸಾಗಿಸಲಾಗುತ್ತಿದ್ದ ಬೃಹತ್ ವಯಾಡಕ್ಟ್ ಟ್ರಕ್ನಿಂದ ಬಿದ್ದು ಆಟೋ ರಿಕ್ಷಾವೊಂದು ಜಖಂಗೊಂಡ ಪರಿಣಾಮ ಅದರ ಚಾಲಕ ಸಾವನ್ನಪ್ಪಿದ ಘಟನೆ ಮಂಗಳವಾರ ತಡರಾತ್ರಿ ಕೋಗಿಲು ಕ್ರಾಸ್ ಬಳಿ ನಡೆದಿದೆ.
ನಮ್ಮ ಮೆಟ್ರೋ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಟ್ರಕ್ ಸಮತೋಲನ ತಪ್ಪಿ, ವಯಾಡಕ್ಟ್ ನಿಂತಿದ್ದ ಆಟೋ ಮೇಲೆ ಉರುಳಿ ಬಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಜನ ಆತನ ರಕ್ಷಣೆಗೆ ದಾವಿಸಿದ್ದರು. ಆದರೆ ಬೃಹತ್ ಗಾತ್ರದ ವಯಾಡೆಕ್ಟ್ ತೆಗೆಯಲು ಕ್ರೇನ್ ಅತ್ಯಗತ್ಯವಾಗಿತ್ತು. ಸ್ಥಳಕ್ಕೆ ಪೊಲೀಸರು ಬಂದರೂ ಸಹ ಕ್ರೇನ್ ಮಾತ್ರ ಬರಲು ತಡವಾಯಿತು. ಇದರಿಂದ ಆಕ್ರೋಶಗೊಂಡ ಜನ ಕಲ್ಲುತೂರಾಟ ಸಹ ಮಾಡಿದ್ದಾರೆ ಎನ್ನಲಾಗಿದೆ.
ಘಟನೆ ನಡೆದ ಎರಡು ಗಂಟೆ ಬಳಿ ಕ್ರೇನ್ ತರಿಸಿ ವಯಾಡೆಕ್ಟ್ ಪಕ್ಕಕ್ಕೆ ಇಡುವ ಮೂಲಕ ಮೃತದೇಹ ಹೊರ ತೆಗೆಯಲಾಗಿದೆ. ಇನ್ನು ಈ ದುರಂತಕ್ಕೆ ಮೆಟ್ರೋ ಅಧಿಕಾರಿಗಳ ಬೇಜವಾಬ್ದಾರಿ ತನವೇ ಕಾರಣ ಅಂತ ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ವಯಾಡೆಕ್ಟ್ ಮುಗುಚಿ ಆಟೋ ಮೇಲೆ ಬಿದ್ದ ತಕ್ಷಣ ಲಾರಿ ಚಾಲಕ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಯಲಹಂಕ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…