ಬೆಂಗಳೂರು : ನಮ್ಮ ಮೆಟ್ರೋ ನಿರ್ಮಾಣ ಕಾರ್ಯದಲ್ಲಿ ಸುರಕ್ಷತಾ ಲೋಪಕ್ಕೆ ಮತ್ತೊಂದು ದುರಂತ ಸಂಭವಿಸಿದೆ. ಯೋಜನೆಗಾಗಿ ಸಾಗಿಸಲಾಗುತ್ತಿದ್ದ ಬೃಹತ್ ವಯಾಡಕ್ಟ್ ಟ್ರಕ್ನಿಂದ ಬಿದ್ದು ಆಟೋ ರಿಕ್ಷಾವೊಂದು ಜಖಂಗೊಂಡ ಪರಿಣಾಮ ಅದರ ಚಾಲಕ ಸಾವನ್ನಪ್ಪಿದ ಘಟನೆ ಮಂಗಳವಾರ ತಡರಾತ್ರಿ ಕೋಗಿಲು ಕ್ರಾಸ್ ಬಳಿ ನಡೆದಿದೆ.
ನಮ್ಮ ಮೆಟ್ರೋ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಟ್ರಕ್ ಸಮತೋಲನ ತಪ್ಪಿ, ವಯಾಡಕ್ಟ್ ನಿಂತಿದ್ದ ಆಟೋ ಮೇಲೆ ಉರುಳಿ ಬಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಜನ ಆತನ ರಕ್ಷಣೆಗೆ ದಾವಿಸಿದ್ದರು. ಆದರೆ ಬೃಹತ್ ಗಾತ್ರದ ವಯಾಡೆಕ್ಟ್ ತೆಗೆಯಲು ಕ್ರೇನ್ ಅತ್ಯಗತ್ಯವಾಗಿತ್ತು. ಸ್ಥಳಕ್ಕೆ ಪೊಲೀಸರು ಬಂದರೂ ಸಹ ಕ್ರೇನ್ ಮಾತ್ರ ಬರಲು ತಡವಾಯಿತು. ಇದರಿಂದ ಆಕ್ರೋಶಗೊಂಡ ಜನ ಕಲ್ಲುತೂರಾಟ ಸಹ ಮಾಡಿದ್ದಾರೆ ಎನ್ನಲಾಗಿದೆ.
ಘಟನೆ ನಡೆದ ಎರಡು ಗಂಟೆ ಬಳಿ ಕ್ರೇನ್ ತರಿಸಿ ವಯಾಡೆಕ್ಟ್ ಪಕ್ಕಕ್ಕೆ ಇಡುವ ಮೂಲಕ ಮೃತದೇಹ ಹೊರ ತೆಗೆಯಲಾಗಿದೆ. ಇನ್ನು ಈ ದುರಂತಕ್ಕೆ ಮೆಟ್ರೋ ಅಧಿಕಾರಿಗಳ ಬೇಜವಾಬ್ದಾರಿ ತನವೇ ಕಾರಣ ಅಂತ ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ವಯಾಡೆಕ್ಟ್ ಮುಗುಚಿ ಆಟೋ ಮೇಲೆ ಬಿದ್ದ ತಕ್ಷಣ ಲಾರಿ ಚಾಲಕ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಯಲಹಂಕ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…