Featured

ಬೆಂಗಳೂರು: ಮೆಟ್ರೋ  ಟ್ರ್ಯಾಕ್‌ಗೆ ಜಿಗಿದು ಯುವಕ ಆತ್ಮಹತ್ಯೆ  – Vishwanews24

ಬೆಂಗಳೂರು: ಮೆಟ್ರೋ  ರೈಲಿನ ಟ್ರ್ಯಾಕ್‌ಗೆ ಜಿಗಿದು ಯುವಕ ಆತ್ಮಹತ್ಯೆ

ಬೆಂಗಳೂರು: ನಮ್ಮ ಮೆಟ್ರೋ  ರೈಲಿನ ಟ್ರ್ಯಾಕ್‌ಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಟ್ರೈನ್ ಬರುವಾಗ ಯುವಕ ಹಳಿಗೆ ಜಿಗಿದಿದ್ದಾನೆ. ಯುವಕ ಯಾರು? ಯಾಕಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬುದು ತಿಳಿದು ಬಂದಿಲ್ಲ. ಮಾ.21ರ ಮಧ್ಯಾಹ್ನ 2:10ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಬಿಎಂಆರ್‌ಸಿಎಲ್‌ ಎಕ್ಸ್‌ ಮೂಲಕ ತಿಳಿಸಿದೆ.

ಮೆಟ್ರೋ ಹಳಿಗೆ ಹಾರಿದ ಕಾರಣಕ್ಕೆ 15 ನಿಮಿಷಕ್ಕೂ ಹೆಚ್ಚು ಸಮಯ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ರೈಲು ಹಳಿಗೆ ಹಾರಿದ ಯುವಕನನ್ನು ಕೂಡಲೇ ಅಲ್ಲಿದ್ದ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಆತ ಮಾರ್ಗ ಮಧ್ಯೆದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೆಟ್ರೋ ಓಡಾಟವನ್ನು ಬಂದ್‌ ಮಾಡಿ ನಿಲ್ದಾಣದಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಹೊರ ಕಳಿಸಿದ್ದಾರೆ.

ಸದ್ಯ ಅತ್ತಿಗುಪ್ಪೆ ನಿಲ್ದಾಣದಲ್ಲಿ ರೈಲು ಓಡಾಟ ಸ್ಥಗಿತವಾಗಿದ್ದು, ಮಾಗಡಿ ರೋಡ್‌ನಿಂದ ವೈಟ್ ಫೀಲ್ಡ್‌ವರೆಗೆ ಮಾತ್ರ ಮೆಟ್ರೋ ಸಂಚಾರ ಇದೆ. ಮಾಗಡಿ ರಸ್ತೆಯಿಂದ ಚಲ್ಲಘಟ್ಟದವರೆಗೆ ಯಾವುದೇ ಸೇವೆ ಇಲ್ಲ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವಿಜಯನಗರ ಪೊಲೀಸರು ಹಾಗೂ ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

52 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

1 hour ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

1 hour ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago