ಬೆಂಗಳೂರು: ಯಮಹಾ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ, 50ಕ್ಕೂ ಹೆಚ್ಚು ಬೈಕ್ಗಳು ಸುಟ್ಟು ಭಸ್ಮವಾದ ಘಟನೆ ಮಹದೇವಪುರದ ಬಿ.ನಾರಾಯಣಪುರದಲ್ಲಿ ನಡೆದಿದೆ.
ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 7 ಗಂಟೆಗೆ ಶೋರೂಂನ ಸಿಬ್ಬಂದಿ ಮನೆಗೆ ತೆರಳಿದ್ದರು. ಇನ್ನೂ 8 ಗಂಟೆ ಸುಮಾರಿಗೆ ಸೆಕ್ಯೂರಿಟಿ ಊಟಕ್ಕೆ ತೆರಳಿದ್ದರು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಅವಘಡದಿಂದ ಶೋರೂಂನಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಅಲ್ಲದೇ ಶೋ ರೂಂ ಹಿಂಬದಿಯಲ್ಲಿರುವ ಸರ್ವೀಸ್ ಸೆಂಟರ್ಗೆ ಸಹ ಬೆಂಕಿ ತಗುಲಿದೆ.
ತಕ್ಷಣ ಆಗ್ನಿಶಾಮಕ ಸಿಬ್ಬಂದಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಅಷ್ಟರಲ್ಲಾಗಲೇ ದೊಡ್ಡ ಮಟ್ಟದಲ್ಲಿ ಬೆಂಕಿ ಅವರಿಸಿ ಶೋರೂಂನಲ್ಲಿದ್ದ 40ಕ್ಕೂ ಹೆಚ್ಚು ಬೈಕ್ ಹಾಗೂ ಶೋರೂಂ ಹಿಂಭಾಗದ ಸರ್ವಿಸ್ ಸೆಂಟರ್ನಲ್ಲಿದ್ದ 20ಕ್ಕೂ ಹೆಚ್ಚು ಬೈಕ್ಗಳು ಬೆಂಕಿಗೆ ಆಹುತಿಯಾಗಿವೆ.
ಅಗ್ನಿ ಅವಘಡ ಸಂಭಿವಿಸಿದ ಶೋರೂಂ ಪಕ್ಕದಲ್ಲಿ ಮತ್ತೊಂದು ಶೋರೂಂ ಇದ್ದು, ಅಲ್ಲಿಗೂ ಬೆಂಕಿ ವ್ಯಾಪಿಸಿತ್ತು. ಅಲ್ಲಿನ ಬೈಕ್ಗಳನ್ನು ತಕ್ಷಣ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬಳಿಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…