ಬೆಂಗಳೂರು: ಯಮಹಾ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ, 50ಕ್ಕೂ ಹೆಚ್ಚು ಬೈಕ್ಗಳು ಸುಟ್ಟು ಭಸ್ಮವಾದ ಘಟನೆ ಮಹದೇವಪುರದ ಬಿ.ನಾರಾಯಣಪುರದಲ್ಲಿ ನಡೆದಿದೆ.
ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 7 ಗಂಟೆಗೆ ಶೋರೂಂನ ಸಿಬ್ಬಂದಿ ಮನೆಗೆ ತೆರಳಿದ್ದರು. ಇನ್ನೂ 8 ಗಂಟೆ ಸುಮಾರಿಗೆ ಸೆಕ್ಯೂರಿಟಿ ಊಟಕ್ಕೆ ತೆರಳಿದ್ದರು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಅವಘಡದಿಂದ ಶೋರೂಂನಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಅಲ್ಲದೇ ಶೋ ರೂಂ ಹಿಂಬದಿಯಲ್ಲಿರುವ ಸರ್ವೀಸ್ ಸೆಂಟರ್ಗೆ ಸಹ ಬೆಂಕಿ ತಗುಲಿದೆ.
ತಕ್ಷಣ ಆಗ್ನಿಶಾಮಕ ಸಿಬ್ಬಂದಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಅಷ್ಟರಲ್ಲಾಗಲೇ ದೊಡ್ಡ ಮಟ್ಟದಲ್ಲಿ ಬೆಂಕಿ ಅವರಿಸಿ ಶೋರೂಂನಲ್ಲಿದ್ದ 40ಕ್ಕೂ ಹೆಚ್ಚು ಬೈಕ್ ಹಾಗೂ ಶೋರೂಂ ಹಿಂಭಾಗದ ಸರ್ವಿಸ್ ಸೆಂಟರ್ನಲ್ಲಿದ್ದ 20ಕ್ಕೂ ಹೆಚ್ಚು ಬೈಕ್ಗಳು ಬೆಂಕಿಗೆ ಆಹುತಿಯಾಗಿವೆ.
ಅಗ್ನಿ ಅವಘಡ ಸಂಭಿವಿಸಿದ ಶೋರೂಂ ಪಕ್ಕದಲ್ಲಿ ಮತ್ತೊಂದು ಶೋರೂಂ ಇದ್ದು, ಅಲ್ಲಿಗೂ ಬೆಂಕಿ ವ್ಯಾಪಿಸಿತ್ತು. ಅಲ್ಲಿನ ಬೈಕ್ಗಳನ್ನು ತಕ್ಷಣ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬಳಿಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…