Featured

ಬೆಂಗಳೂರು :ಯುಗಾದಿ, ರಂಜಾನ್‌ ಹಬ್ಬದ ಹಿನ್ನೆಲೆ  ಮಾ.31ರ ವರೆಗೆ ವಿಶೇಷ ಬಸ್‌

ಬೆಂಗಳೂರು :ಯುಗಾದಿ, ರಂಜಾನ್‌ ಹಬ್ಬದ ಹಿನ್ನೆಲೆ  ಮಾ.31ರ ವರೆಗೆ ವಿಶೇಷ ಬಸ್‌  -Vishwanews24

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ 2,000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಈ ವಿಶೇಷ ಬಸ್‌ಗಳು ಮಾರ್ಚ್‌ 28,

29 ಹಾಗೂ 30 ರಂದು ಮೂರು ದಿನ ಬೆಂಗಳೂರಿನಿಂದ ರಾಜ್ಯ, ಹೊರ ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಚಾರ ನಡೆಸಲಿವೆ.

ಈ ಬಗ್ಗೆ ಕೆಎಸ್‌ಆರ್‌ಟಿಸಿ ಪ್ರಕಟಣೆ ನೀಡಿದ್ದು, ಮಾರ್ಚ್‌ 30 ರಂದು ಚಂದ್ರಮಾನ ಯುಗಾದಿ, ಮಾರ್ಚ್‌ 31 ರಂದು ರಂಜಾನ್ ಹಬ್ಬವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಿಂದ ಪ್ರಯಾಣಿಕರು ತಮ್ಮ ಊರುಗಳಿಗೆ ಸಂಚಾರ ನಡೆಸುತ್ತಾರೆ. ಇವರ ಅನುಕೂಲಕ್ಕಾಗಿ ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ. ಈ ಹೆಚ್ಚುವರಿ ಬಸ್‌ಗಳು ಮೆಜೆಸ್ಟಿಕ್, ಶಾಂತಿನಗರ, ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ.

ಮೆಜೆಸ್ಟಿಕ್‌ನಿಂದ
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಈ ವಿಶೇಷ ಬಸ್‌ ಸಂಚರಿಸಲಿವೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ – ಗಂಡನ ಹಿಂಸೆ ತಾಳಲಾರದೆ ತವರು ಸೇರಿದ್ದ ಪತ್ನಿ

ಸ್ಯಾಟಲೈಟ್‌ ಬಸ್‌ ನಿಲ್ದಾಣದಿಂದ
ಮಂಡ್ಯ,ರಾಮನಗರ, ಕುಶಾಲನಗರ, ಚಾಮರಾಜನಗರ, ಕೊಡಗು, ವೀರಾಜಪೇಟೆ, ಪಿರಿಯಾಪಟ್ಟಣಕ್ಕೆ ಬಸ್ ಗಳು ಲಭ್ಯವಿರಲಿದೆ.

ಶಾಂತಿನಗರ ಬಸ್ ನಿಲ್ದಾಣದಿಂದ
ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಝಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ.

Vishwa News 24

Recent Posts

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

17 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

25 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

41 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

56 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago