Featured

ಬೆಂಗಳೂರು ಯುವಕನ ಕಿಡ್ನಾಪ್, ಕೊಲೆ ಪ್ರಕರಣ; ಶವಕ್ಕಾಗಿ ಚಾರ್ಮಾಡಿ ಘಾಟ್ ನಲ್ಲಿ ಹುಡುಕಾಟ – Vishwanews24

ಬೆಂಗಳೂರು ಯುವಕನ ಕಿಡ್ನಾಪ್, ಕೊಲೆ ಪ್ರಕರಣ; ಶವಕ್ಕಾಗಿ ಚಾರ್ಮಾಡಿ ಘಾಟ್ ನಲ್ಲಿ ಹುಡುಕಾಟ

ಕೊಟ್ಟಿಗೆಹಾರ: ಸುಮಾರು 9 ತಿಂಗಳ ಹಿಂದೆ ಕೊಲೆಯಾದ ಯುವಕನ ಶವವನ್ನು ಚಾರ್ಮಾಡಿ ಘಾಟಿ ಪರಿಸರದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ್ದು ಅದರಂತೆ ಬೆಂಗಳೂರು ಕಬ್ಬನ್ ಪಾರ್ಕ್ ಪೊಲೀಸರು ಡಿಸಿಪಿ ನೇತೃತ್ವದಲ್ಲಿ ಇನ್ಸ್ ಪೆಕ್ಟರ್, ಪಿಎಸ್ ಐ ಮತ್ತು ಸಿಬ್ಬಂದಿಗಳು ಶವ ಪತ್ತೆ ಹಚ್ಚುವ ಕಾರ್ಯಾಚರಣೆಗೆ ಮಂಗಳವಾರ ಆಗಮಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ – ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಘಾಟಿಯ ಪ್ರದೇಶಗಳ ಕಣಿವೆಗಳಲ್ಲಿ ಸ್ಥಳೀಯ ಪೊಲೀಸರ ಹಾಗೂ ಸಾರ್ವಜನಿಕರ ಸಹಕಾರದಲ್ಲಿ ಹುಡುಕಾಟ ಆರಂಭಿಸಿದ್ದಾರೆ.

ಘಟನೆಯ ಹಿನ್ನೆಲೆ: ಬೆಂಗಳೂರಿನ ಕೋಣನಕುಂಟೆ ನಿವಾಸಿ ಶರತ್ ಎಂಬಾತ ಸಾಲ ಪಡೆದು ಹಿಂತಿರುಗಿಸದೆ ಓಡಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ಗ್ಯಾಂಗ್ ಶರತ್ ನನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದರು. ಕೊಲೆಯಾದ ಎಚ್. ಶರತ್ ಚಿಕ್ಕಬಳ್ಳಾಪುರ ಹಾಗೂ ಯಲಹಂಕ ನಿವಾಸಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ಸಬ್ಸಿಡಿ ದರದಲ್ಲಿ ವಾಹನ ಕೊಡಿಸುವುದಾಗಿ ನಂಬಿಸಿದ್ದ. ಆದರೆ ಕಾರು ಕೊಡಿಸದೆ ಅಲ್ಲಿನ‌ ಜನರಿಗೆ ವಂಚಿಸಿದ್ದ.ಇದರಿಂದ ಹಣ ಕೊಟ್ಟು ಜನ ಎಚ್. ಶರತ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರು. ಅಷ್ಟೇ ಅಲ್ಲದೆ ಚಿಕ್ಕಬಳ್ಳಾಪುರದ ಮಖಂಡರೊಬ್ಬರಿಗೆ ಹಣ ವಾಪಸ್ ಕೊಡಿಸುವಂತೆ ಜನ ಕೇಳಿಕೊಂಡಿದ್ದಾರೆ. ಜನರ‌ ಮನವಿ‌ ಮೇರೆಗೆ ಅವರು ತನ್ನ ಪುತ್ರನಿಗೆ ಹಣ ವಸೂಲಿ ಮಾಡುವಂತೆ ಹೇಳಿದ್ದ. ಇದರಿಂದ ಇಲ್ಲಿಂದ ಶರತ್ ಕಿಡ್ನಾಪ್ ಆ್ಯಂಡ್ ಮರ್ಡರ್ ಪ್ಲಾನ್ ಆರಂಭವಾಯಿತು ಎಂದು ಕೇಳಿ ಬರುತ್ತಿದೆ.

ಮುಖಂಡರ ಹಾಗೂ ಆತನ‌ ಸ್ನೇಹಿತರು, ಜತೆಗೆ ಹಣ ಪಡೆದುಕೊಂಡ ಕೆಲವರು ಸೇರಿ ಶರತ್‌ ನನ್ನು ಕಿಡ್ನಾಪ್ ಮಾಡಿ ಆತನ ಮೊಬೈಲ್ ನಿಂದಲೇ ಯುವಕನ ತಂದೆ ತಾಯಿಗೆ ‘ನಾನು ದುಡಿಯಲು ಹೋಗುತ್ತಿದ್ದೇನೆ ಹುಡುಕಬೇಡಿ ಎಂದು ಮೆಸೇಜ್’ ಹಾಕಿ ಬಳಿಕ ಮೊಬೈಲನ್ನು ಲಾರಿಯೊಂದರ ಮೇಲೆ ಎಸೆದಿದ್ದಾರೆ. ಲಾರಿ ಮೈಸೂರು ಮಾರ್ಗವಾಗಿ ಸಾಗಿ ಹೊರ ರಾಜ್ಯಕ್ಕೆ ಪ್ರಯಾಣವಾಗಿದ್ದು ಬಳಿಕ ಮೊಬೈಲ್ ಸ್ವಿಚ್‌ ಆಫ್ ಆಗಿತ್ತು. ಇಷ್ಟರಲ್ಲಿ ಶರತ್‌ ನನ್ನು ಬನಶಂಕರಿಯಿಂದ ಅಪಹರಿಸಿದ ಗ್ಯಾಂಗ್ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ವಾಟದ ಹೊಸಹಳ್ಳಿಯ ಮಾವಿನ ತೋಟದ ಮನೆಯೊಂದರಲ್ಲಿ ಬಂಧನದಲ್ಲಿ ಇಡಲಾಗಿತ್ತು. ಬಳಿಕ ಆತನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಆತನಿಗೆ ಹಿಂಸೆ ನೀಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಕೊಲೆಯಾದ ಶರತ್‌ ನ ಶವನನ್ನು ಚಾರ್ಮಾಡಿ ಘಾಟ್‌ನಲ್ಲಿ ಎಸೆದು ಯಾರಿಗೂ ಶವದ ಸುಳಿವು ಸಿಗದಂತೆ ಮಾಡಿದ್ದರು. ಸದ್ಯ ಕಬ್ಬನ್ ಪಾರ್ಕ್ ಪೊಲೀಸರು ಸಮೊಟೋ ಪ್ರಕರಣವನ್ನು ದಾಖಲಿಸಿ 10 ಮಂದಿ ಆರೋಪಿಗಳನ್ನು ಬಂಧಿಸಿ ಅವರ ಮೇಲೆ ಕೊಲೆ ಪ್ರಕರಣ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಪತ್ರ‌ ನೀಡಿದ ಸುಳಿವು:

ಈ ಕಿಡ್ನಾಪ್, ಕೊಲೆ 9 ತಿಂಗಳ ಹಿಂದೆಯೇ ನಡೆದಿದೆ. ಆದರೆ ಪ್ರಕರಣ ನಡೆದು ಕೆಲವು ತಿಂಗಳ ನಂತರ ಕೇಂದ್ರ ವಿಭಾಗದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಬಂದ ಪತ್ರ ಹಾಗೂ ಚಿತ್ರಹಿಂಸೆ ನೀಡಿದ ದೃಶ್ಯದ ಪೆನ್ ಡ್ರೈವ್ ಕೊಲೆಯ ಸುಳಿವು ನೀಡಿದೆ.‌

ಬಳಿಕ‌ ಪೊಲೀಸರು ವಿಶೇಷ ತಂಡ ರಚಿಸಿ ರಹಸ್ಯ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಟ್ಟು 10 ಜನರನ್ನು ಬಂಧಿಸಿದಾಗ ಘಟನೆಯ ಸಂಪೂರ್ಣ ಚಿತ್ರಣ ದೊರಕಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಚಾರ್ಮಾಡಿ ಘಾಟಿ ಪರಿಸರಕ್ಕೆ ಕರೆ ತಂದು ಶವ ಹುಡುಕಲು ಮುಂದಾಗಿದ್ದಾರೆ.

ಶವ ಹುಡುಕುವುದೇ ಸವಾಲು:

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಚಾರ್ಮಾಡಿ ಘಾಟಿ ಸಾಕಸ್ಟು ಕಣಿವೆ ಪ್ರದೇಶಗಳನ್ನು ಹೊಂದಿದೆ. ಘಾಟಿಯ ಸ್ಥಳಗಳಲ್ಲಿ ವಿಪರೀತ ಪೊದೆಗಳು ಆಳವಾದ ಕಂದಕಗಳು ಇವೆ. ಘಟನೆ ನಡೆದು 9 ತಿಂಗಳು ಕಳೆದಿರುವುದರಿಂದ ಇಲ್ಲಿ ತಂದು ಎಸೆಯಲಾಗಿದೆ ಎಂದಿರುವ ಶವ ಮಳೆಗಾಲದಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ, ಪ್ರದೇಶದಲ್ಲಿ ಸಾಕಷ್ಟು ವನ್ಯಮೃಗಗಳು ಇದ್ದು ಅವುಗಳ ಪಾಲಾಗಿರುವ ಶಂಕೆಯು ಇದೆ.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

4 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

5 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

5 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

5 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

7 hours ago