ಬೆಂಗಳೂರು: ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ ಬೆಂಗಳೂರಿನಲ್ಲಿಯೂ ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ನಗರದ ವೈಯಾಲಿಕಾವಲ್ನ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು 30 ಕ್ಕೂ ಹೆಚ್ಚು ಪೀಸ್ ಪೀಸ್ ಮಾಡಿ ಫ್ರಿಜ್ನಲ್ಲಿ ಇಟ್ಟಿದ್ದಾನೆ. ಮೇಲ್ನೋಟಕ್ಕೆ ಹೊರ ರಾಜ್ಯದ ಸುಮಾರು 25 ರಿಂದ 26 ವಯಸ್ಸಿನ ಯುವತಿ ಎಂದು ಗುರುತಿಸಲಾಗಿದ್ದು, ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ಹತ್ಯೆ ಮಾಡಲಾಗಿದೆ. ಸಧ್ಯ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಎರಡು ದಿನಗಳಿಂದ ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನಲೆ ಅದೇ ಬಿಲ್ಡಿಂಗ್ನ ಅಕ್ಕಪಕ್ಕದವರು ಇವತ್ತು ಸಂಬಂಧಿಕರಿಗೆ ಹೇಳಿದ್ದಾರೆ. ಅದರಂತೆ ಕೊಲೆಯಾದಂತಹ ಯುವತಿಯ ತಾಯಿ ಮತ್ತು ಅಕ್ಕ ಮನೆ ಬಳಿ ಬಂದು ಬೀಗ ಹೊಡೆದು ಒಳಹೋದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಮಾತನಾಡಿದ ಕೇಂದ್ರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್, ‘ಒರ್ವನೇ ಕೊಲೆ ಮಾಡಿದ್ದು, 30ಕ್ಕೂ ಹೆಚ್ಚು ಪೀಸ್ ಮಾಡಿ ಸಿಂಗಲ್ ಡೋರ್ನ 165 ಲೀಟರ್ಸ್ ಫ್ರೀಡ್ಜ್ನಲ್ಲಿ ಬಾಡಿ ಇಡಲಾಗಿದೆ. ಮೃತ ಯುವತಿಯನ್ನು ಛತ್ತೀಸ್ಘಡ್ ಅಥವಾ ಪಶ್ಚಿಮ ಬಂಗಾಳ ಮೂಲದ ಮಹಾಲಕ್ಷ್ಮಿ ಎಂದು ಗುರುತಿಸಲಾಗಿದೆ. ಬೇರೆ ರಾಜ್ಯದವರು ಇಲ್ಲಿಯೇ ಸೆಟಲ್ ಆಗಿದ್ದವರು. ಗಂಡನ ಜೊತೆಗೆ ಬೇರೆಯಾಗಿದ್ದ ಮಹಿಳೆ, ಒಬ್ಬಳೆ ವಾಸವಾಗಿದ್ದಳು ಎಂದಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…