ಬೆಂಗಳೂರು: ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ ಬೆಂಗಳೂರಿನಲ್ಲಿಯೂ ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ನಗರದ ವೈಯಾಲಿಕಾವಲ್ನ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು 30 ಕ್ಕೂ ಹೆಚ್ಚು ಪೀಸ್ ಪೀಸ್ ಮಾಡಿ ಫ್ರಿಜ್ನಲ್ಲಿ ಇಟ್ಟಿದ್ದಾನೆ. ಮೇಲ್ನೋಟಕ್ಕೆ ಹೊರ ರಾಜ್ಯದ ಸುಮಾರು 25 ರಿಂದ 26 ವಯಸ್ಸಿನ ಯುವತಿ ಎಂದು ಗುರುತಿಸಲಾಗಿದ್ದು, ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ಹತ್ಯೆ ಮಾಡಲಾಗಿದೆ. ಸಧ್ಯ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಎರಡು ದಿನಗಳಿಂದ ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನಲೆ ಅದೇ ಬಿಲ್ಡಿಂಗ್ನ ಅಕ್ಕಪಕ್ಕದವರು ಇವತ್ತು ಸಂಬಂಧಿಕರಿಗೆ ಹೇಳಿದ್ದಾರೆ. ಅದರಂತೆ ಕೊಲೆಯಾದಂತಹ ಯುವತಿಯ ತಾಯಿ ಮತ್ತು ಅಕ್ಕ ಮನೆ ಬಳಿ ಬಂದು ಬೀಗ ಹೊಡೆದು ಒಳಹೋದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಮಾತನಾಡಿದ ಕೇಂದ್ರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್, ‘ಒರ್ವನೇ ಕೊಲೆ ಮಾಡಿದ್ದು, 30ಕ್ಕೂ ಹೆಚ್ಚು ಪೀಸ್ ಮಾಡಿ ಸಿಂಗಲ್ ಡೋರ್ನ 165 ಲೀಟರ್ಸ್ ಫ್ರೀಡ್ಜ್ನಲ್ಲಿ ಬಾಡಿ ಇಡಲಾಗಿದೆ. ಮೃತ ಯುವತಿಯನ್ನು ಛತ್ತೀಸ್ಘಡ್ ಅಥವಾ ಪಶ್ಚಿಮ ಬಂಗಾಳ ಮೂಲದ ಮಹಾಲಕ್ಷ್ಮಿ ಎಂದು ಗುರುತಿಸಲಾಗಿದೆ. ಬೇರೆ ರಾಜ್ಯದವರು ಇಲ್ಲಿಯೇ ಸೆಟಲ್ ಆಗಿದ್ದವರು. ಗಂಡನ ಜೊತೆಗೆ ಬೇರೆಯಾಗಿದ್ದ ಮಹಿಳೆ, ಒಬ್ಬಳೆ ವಾಸವಾಗಿದ್ದಳು ಎಂದಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…