Featured

ಬೆಂಗಳೂರು : ರಸ್ತೆ ಗುಂಡಿಗಳ ವಿರುದ್ಧ ಆಮ್ ಆದ್ಮಿ ಪಾರ್ಟಿಯು  ಸಮರ ಆರಂಭ : ಪಕ್ಷದ ಮುಖಂಡ ಜಗದೀಶ್ – Vishwanews24

ಬೆಂಗಳೂರಿನ ಜನರ ಹಿತಕ್ಕಾಗಿ ಯಾವುದೇ ತೊಂದರೆ ತೆಗೆದುಕೊಳ್ಳಲು ಸಿದ್ಧ ..

ರಸ್ತೆ ಗುಂಡಿಗಳ ವಿರುದ್ಧ ಆಮ್ ಆದ್ಮಿ ಪಾರ್ಟಿಯು  ಸಮರ ಆರಂಭ : ಪಕ್ಷದ ಮುಖಂಡ ಜಗದೀಶ್ – Vishwanews24

ಬೆಂಗಳೂರು: ನಗರದ ರಸ್ತೆ ಗುಂಡಿಗಳು ಹಾಗೂ ಕಳಪೆ ರಸ್ತೆ ಕಾಮಗಾರಿ ವಿರುದ್ಧ ಹೋರಾಡಲು ಆಮ್ ಆದ್ಮಿ ಪಾರ್ಟಿಯು ಕಾರ್ಯಪಡೆ ಹಾಗೂ ವಾಟ್ಸಪ್ ಸಹಾಯವಾಣಿಯನ್ನು ಆರಂಭಿಸಿದ್ದು, ಇಲ್ಲಿನ ಜನರ ಹಿತಕ್ಕಾಗಿ ಯಾವುದೇ ತೊಂದರೆ ತೆಗೆದುಕೊಳ್ಳಲು ಸಿದ್ಧವಿದ್ದೇವೆ ಎಂದು ಪಕ್ಷದ ಮುಖಂಡ ಹಾಗೂ ಖ್ಯಾತ ವಕೀಲರಾದ ಜಗದೀಶ್ ಮಹಾದೇವ್ ತಿಳಿಸಿದರು.

ಬೆಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯ ಭ್ರಷ್ಟಾಚಾರದಿಂದಾಗಿ ಬೆಂಗಳೂರಿನ ಬಹುತೇಕ ರಸ್ತೆಗಳಲ್ಲಿ ಯಮಸ್ವರೂಪಿ ಗುಂಡಿಗಳು ಬಿದ್ದಿವೆ. ಇವುಗಳಿಂದಾಗಿ ಕೆಲವು ವಾಹನಸವಾರರು ಕೈಕಾಲು ಮುರಿದುಕೊಂಡರೆ, ಇನ್ನು ಕೆಲವರು ಜೀವವನ್ನೇ ಕಳೆದುಕೊಂಡಿದ್ದಾರೆ. ರಸ್ತೆ ಗುಂಡಿಗಳ ವಿರುದ್ಧ ಆಮ್ ಆದ್ಮಿ ಪಾರ್ಟಿಯು ಸಮರ ಆರಂಭಿಸಿದ್ದು, ಇದಕ್ಕಾಗಿ ವಿಶೇಷ ಕಾರ್ಯಪಡೆ ಹಾಗೂ ವಾಟ್ಸಪ್ ಸಹಾಯವಾಣಿಯನ್ನು ಆರಂಭಿಸುತ್ತಿದ್ದೇವೆ. ಸೂಕ್ತ ಕಾನೂನು ಹೋರಾಟದ ಮೂಲಕ ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡುವ ಪಣತೊಟ್ಟಿದ್ದೇವೆ” ಎಂದು ಹೇಳಿದರು.

ನಗರದಲ್ಲಿ ರಸ್ತೆ ಕಳಪೆ ಕಾಮಗಾರಿ ನಡೆಯುತ್ತಿರುವುದು ಹಾಗೂ ಅಪಾಯಕಾರಿ ಗುಂಡಿಗಳು ಕಂಡುಬಂದರೆ ತಕ್ಷಣವೇ ನಮ್ಮ ವಾಟ್ಸಪ್ ಸಹಾಯವಾಣಿ 9513319676 ಸಂಖ್ಯೆಗೆ ಮೆಸೇಜ್ ಕಳುಹಿಸಬಹುದು. ನಮ್ಮ ಕಾರ್ಯಪಡೆಯು ಪ್ರಕರಣದ ಬಗ್ಗೆ ಪರಾಮರ್ಶೆ ನಡೆಸಿ ಕೂಡಲೇ ಕಾರ್ಯಪ್ರವೃತ್ತವಾಗಲಿದೆ. ಬಿಬಿಎಂಪಿ, ಸ್ಥಳೀಯ ಶಾಸಕ, ಮಾಜಿ ಕಾರ್ಪೊರೇಟರ್‌, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಿಸಿ, ಕಾನೂನು ಹೋರಾಟ ಆರಂಭಿಸುತ್ತೇವೆ. ರಾಜಧಾನಿ ಬೆಂಗಳೂರು ಹಾಗೂ ಇಲ್ಲಿನ ಜನರ ಹಿತಕ್ಕಾಗಿ ಯಾವುದೇ ತೊಂದರೆ ತೆಗೆದುಕೊಳ್ಳಲು ನಾವು ಸಂಪೂರ್ಣ ಸಿದ್ಧವಿದ್ದೇವೆ ಎಂದು ಅಭಯ ವ್ಯಕ್ತಪಡಿಸಿದರು.

Vishwa News 24

Recent Posts

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

29 minutes ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

39 minutes ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

43 minutes ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

60 minutes ago

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ – vishwanews24

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…

1 hour ago

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

21 hours ago