ಬೆಂಗಳೂರು: ನಗರದ ರಸ್ತೆ ಗುಂಡಿಗಳು ಹಾಗೂ ಕಳಪೆ ರಸ್ತೆ ಕಾಮಗಾರಿ ವಿರುದ್ಧ ಹೋರಾಡಲು ಆಮ್ ಆದ್ಮಿ ಪಾರ್ಟಿಯು ಕಾರ್ಯಪಡೆ ಹಾಗೂ ವಾಟ್ಸಪ್ ಸಹಾಯವಾಣಿಯನ್ನು ಆರಂಭಿಸಿದ್ದು, ಇಲ್ಲಿನ ಜನರ ಹಿತಕ್ಕಾಗಿ ಯಾವುದೇ ತೊಂದರೆ ತೆಗೆದುಕೊಳ್ಳಲು ಸಿದ್ಧವಿದ್ದೇವೆ ಎಂದು ಪಕ್ಷದ ಮುಖಂಡ ಹಾಗೂ ಖ್ಯಾತ ವಕೀಲರಾದ ಜಗದೀಶ್ ಮಹಾದೇವ್ ತಿಳಿಸಿದರು.
ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯ ಭ್ರಷ್ಟಾಚಾರದಿಂದಾಗಿ ಬೆಂಗಳೂರಿನ ಬಹುತೇಕ ರಸ್ತೆಗಳಲ್ಲಿ ಯಮಸ್ವರೂಪಿ ಗುಂಡಿಗಳು ಬಿದ್ದಿವೆ. ಇವುಗಳಿಂದಾಗಿ ಕೆಲವು ವಾಹನಸವಾರರು ಕೈಕಾಲು ಮುರಿದುಕೊಂಡರೆ, ಇನ್ನು ಕೆಲವರು ಜೀವವನ್ನೇ ಕಳೆದುಕೊಂಡಿದ್ದಾರೆ. ರಸ್ತೆ ಗುಂಡಿಗಳ ವಿರುದ್ಧ ಆಮ್ ಆದ್ಮಿ ಪಾರ್ಟಿಯು ಸಮರ ಆರಂಭಿಸಿದ್ದು, ಇದಕ್ಕಾಗಿ ವಿಶೇಷ ಕಾರ್ಯಪಡೆ ಹಾಗೂ ವಾಟ್ಸಪ್ ಸಹಾಯವಾಣಿಯನ್ನು ಆರಂಭಿಸುತ್ತಿದ್ದೇವೆ. ಸೂಕ್ತ ಕಾನೂನು ಹೋರಾಟದ ಮೂಲಕ ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡುವ ಪಣತೊಟ್ಟಿದ್ದೇವೆ” ಎಂದು ಹೇಳಿದರು.
ನಗರದಲ್ಲಿ ರಸ್ತೆ ಕಳಪೆ ಕಾಮಗಾರಿ ನಡೆಯುತ್ತಿರುವುದು ಹಾಗೂ ಅಪಾಯಕಾರಿ ಗುಂಡಿಗಳು ಕಂಡುಬಂದರೆ ತಕ್ಷಣವೇ ನಮ್ಮ ವಾಟ್ಸಪ್ ಸಹಾಯವಾಣಿ 9513319676 ಸಂಖ್ಯೆಗೆ ಮೆಸೇಜ್ ಕಳುಹಿಸಬಹುದು. ನಮ್ಮ ಕಾರ್ಯಪಡೆಯು ಪ್ರಕರಣದ ಬಗ್ಗೆ ಪರಾಮರ್ಶೆ ನಡೆಸಿ ಕೂಡಲೇ ಕಾರ್ಯಪ್ರವೃತ್ತವಾಗಲಿದೆ. ಬಿಬಿಎಂಪಿ, ಸ್ಥಳೀಯ ಶಾಸಕ, ಮಾಜಿ ಕಾರ್ಪೊರೇಟರ್, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಿಸಿ, ಕಾನೂನು ಹೋರಾಟ ಆರಂಭಿಸುತ್ತೇವೆ. ರಾಜಧಾನಿ ಬೆಂಗಳೂರು ಹಾಗೂ ಇಲ್ಲಿನ ಜನರ ಹಿತಕ್ಕಾಗಿ ಯಾವುದೇ ತೊಂದರೆ ತೆಗೆದುಕೊಳ್ಳಲು ನಾವು ಸಂಪೂರ್ಣ ಸಿದ್ಧವಿದ್ದೇವೆ ಎಂದು ಅಭಯ ವ್ಯಕ್ತಪಡಿಸಿದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…