ಬೆಂಗಳೂರು : ರಾಜ್ಯದಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ -Vishwanews24
ಬೆಂಗಳೂರು : ರಾಜ್ಯದಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ -Vishwanews24
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದ್ದು, ಮೂರನೇ ದಿನಕ್ಕೆ ಕಾಲಿಟ್ಟಿದೆ.
ರಾಜ್ಯ ಸರ್ಕಾರ ಸಾರಿಗೆ ನೌಕರರ ಈಡೇರಿಕೆ ಸಾಧ್ಯವಿಲ್ಲ ಎಂದರೆ, ಸಾರಿಗೆ ನೌಕರರು ತಮ್ಮ ಬೇಡಿಕೆ ಈಡೇರಿಸದಿದ್ದರೆ ಮುಷ್ಕರ ಕೈಬಿಡೋದಿಲ್ಲ ಎಂದು ಮುಷ್ಕರ ಮುಂದುವರೆಸಿದ್ದಾರೆ.
ಸಾರಿಗೆ ನೌಕರರು ರಾಜ್ಯ ಸರ್ಕಾರದ ವಿರುದ್ದ ಅನಿರ್ಧಿಷ್ಟಾವಧಿಯ ಮುಷ್ಕರ ಮುಂದುವರೆಸಿದ್ದಾರೆ. ಮುಷ್ಕರದ ಹಿನ್ನೆಲೆ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಸಾರಿಗೆ ಬಸ್ಗಳಿಲ್ಲದೇ ಪ್ರಯಾಣಿಕರು ಪರದಾಡುವ ಸ್ಥಿತಿ ಉಂಟಾಗಿದೆ.
ರಾಜ್ಯ ಸರ್ಕಾರ ಸಾರಿಗೆ ನೌಕರರ ಬೇಡಿಕೆ ಈಡೇರಿಸುವ ಬದಲು ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲು ಮುಂದಾಗಿದೆ. ಇದಕ್ಕಾಗಿ ಈಗಾಗಲೇ 2 ವರ್ಷಗಳ ಹಿಂದೆ ನಿವೃತ್ತರಾದ ಸಾರಿಗೆ ನೌಕರರನ್ನು ಪುನಃ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.
ಸ್ಯಾಂಡಲ್ವುಡ್ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಕೊರೊನಾ ಪಾಸಿಟಿವ್ -Vishwanews24
ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ನಿಗದಿತ ಪಾಸ್ ಇದ್ದರೂ ಎರಡು ದಿನಗಳಿಂದ ಬಸ್ ಸೇವೆ ಒದಗಿಸಲು ವಿಫಲವಾದ ಕಾರಣ ಕೆಂಗೇರಿಯ ಜೆಎಸ್ಎಸ್ ಅಕಾಡೆಮಿ ಆಫ್ ಟೆಕ್ನಿಕಲ್ ಎಜುಕೇಷನ್ನ ಬಿಇ ಮೊದಲ ಸೆಮಿಸ್ಟರ್ ವಿದ್ಯಾರ್ಥಿನಿ, ತುಮಕೂರು ಮೂಲದ ಜಿ.ಪಾವನಾ ಅವರು 10 ಲಕ್ಷ. ರೂ. ಪರಿಹಾರ ನೀಡುವಂತೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ವಕೀಲರ ಮೂಲಕ ನೋಟಿಸ್ ನೀಡಿದ್ದಾರೆ.
ಬಿಎಂಟಿಸಿ ಎಂಡಿ ಹಾಗೂ ಮುಷ್ಕರಕ್ಕೆ ಕರೆ ನೀಡಿರುವ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ನೋಟಿಸ್ನಲ್ಲಿ ತಿಳಿಸಿದ್ದಾರೆ.
