Featured

ಬೆಂಗಳೂರು: ಲೇಡಿ ಡಾಕ್ಟರ್ ವೇಷದಲ್ಲಿ ಆಸ್ಪತ್ರೆಯಲ್ಲಿ ಕಳ್ಳತನ : ರೋಗಿಗಳ ಚಿನ್ನಾಭರಣ ಕದ್ದು ಪರಾರಿ- Vishwanews24

ಬೆಂಗಳೂರು: ವೈದ್ಯರ ವೇಷ ಧರಿಸಿ ಚಿಕಿತ್ಸೆ ಕೊಡುವುದಾಗಿ ಹೇಳಿ ರೋಗಿಗಳ ಚಿನ್ನಾಭರಣ ಕದ್ದು ಪರಾರಿಯಾದ ಮಹಿಳೆ- Vishwanews24

ಬೆಂಗಳೂರು: ಲೇಡಿ ಡಾಕ್ಟರ್ ವೇಷದಲ್ಲಿ ನಗರದ ಪ್ರತಿಷ್ಠಿತ ಆಸ್ಪತ್ರೆಗೆ ನುಗ್ಗಿದ ಮಹಿಳೆಯೊಬ್ಬಳು ರೋಗಿಗಳ ಬಳಿ ಚಿನ್ನಾಭರಣ ಕಳವು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಇಲ್ಲಿನ ಅಶೋಕ ನಗರ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿರುವ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ  ಘಟನೆ ನಡೆದಿದೆ.

ಇದೇ ಜನವರಿ 11 ರಂದು ಉಸಿರಾಟ ಸಮಸ್ಯೆಯಿಂದ ಸರಸಮ್ಮ ಎಂಬ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದರು. ಅಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಡಾಕ್ಟರ್ ಡ್ರೆಸ್ ಹಾಕಿಕೊಂಡು ವಾರ್ಡ್ ಒಳಗೆ ಬಂದ ಖತರ್ನಾಕ್ ಲೇಡಿ, ರೋಗಿಗೆ ಚಿಕಿತ್ಸೆ ನೀಡಬೇಕೆಂದು ಎಲ್ಲರಿಗೂ ಹೊರಗೆ ಹೋಗುವಂತೆ ಸೂಚಿಸಿದ್ದಾಳೆ. ಕೆಲ ಹೊತ್ತಿನ ನಂತರ ಆಕೆಯೂ ಹೊರಗೆ ಹೋಗಿದ್ದಾಳೆ.

ಇದೇ ಸಮಯಕ್ಕೆ ಒಳಗೆ ಬಂದ ಶುಶ್ರೂಷಕಿ ಆ ಡಾಕ್ಟರ್ ಯಾರು? ಅಂತಾ ಪ್ರಶ್ನೆ ಮಾಡಿದ್ದಾರೆ. ಕೊನೆಗೆ ಡಾಕ್ಟರ್ ಯಾರು ಬಂದಿಲ್ಲ ಎಂದು ತಿಳಿದು, ಆಕೆ ನಕಲಿ ಡಾಕ್ಟರ್ ಅನ್ನೋದು ಗೊತ್ತಾಗಿದೆ. ಅನುಮಾನಗೊಂಡು ಸರಸಮ್ಮರನ್ನ ಚೆಕ್ ಮಾಡಿದ ವೇಳೆ ಎರಡು ಉಂಗುರ, ಕತ್ತಿನಲ್ಲಿದ್ದ ಸರ ಸೇರಿ 41 ಗ್ರಾಂ ಚಿನ್ನಾಭರಣ ಕಳವು ಮಾಡಿರೋದು ಗೊತ್ತಾಗಿದೆ.

ನಂತರ ಪೊಲೀಸರಿಗೆ ಮಾಹಿತಿ ನೀಡಿ, ವಿಚಾರಣೆ ನಡೆಸಿದಾಗ ಆ ನಕಲಿ ಲೇಡಿ ಡಾಕ್ಟರ್ ಅಕ್ಕಪಕ್ಕದ ವಾರ್ಡ್ಗಳಲ್ಲೂ ಇದೇ ರೀತಿ ಕೃತ್ಯವೆಸಗಿರೋದು ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಅಶೋಕ ನಗರ ಪೊಲೀಸರು, ನಕಲಿ ಡಾಕ್ಟರ್ ಗಾಗಿ ಹುಡುಕಾಟ ನಡೆಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago