Featured

ಬೆಂಗಳೂರು: ಲೇಡಿ ಡಾಕ್ಟರ್ ವೇಷದಲ್ಲಿ ಆಸ್ಪತ್ರೆಯಲ್ಲಿ ಕಳ್ಳತನ : ರೋಗಿಗಳ ಚಿನ್ನಾಭರಣ ಕದ್ದು ಪರಾರಿ- Vishwanews24

ಬೆಂಗಳೂರು: ವೈದ್ಯರ ವೇಷ ಧರಿಸಿ ಚಿಕಿತ್ಸೆ ಕೊಡುವುದಾಗಿ ಹೇಳಿ ರೋಗಿಗಳ ಚಿನ್ನಾಭರಣ ಕದ್ದು ಪರಾರಿಯಾದ ಮಹಿಳೆ- Vishwanews24

ಬೆಂಗಳೂರು: ಲೇಡಿ ಡಾಕ್ಟರ್ ವೇಷದಲ್ಲಿ ನಗರದ ಪ್ರತಿಷ್ಠಿತ ಆಸ್ಪತ್ರೆಗೆ ನುಗ್ಗಿದ ಮಹಿಳೆಯೊಬ್ಬಳು ರೋಗಿಗಳ ಬಳಿ ಚಿನ್ನಾಭರಣ ಕಳವು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಇಲ್ಲಿನ ಅಶೋಕ ನಗರ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿರುವ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ  ಘಟನೆ ನಡೆದಿದೆ.

ಇದೇ ಜನವರಿ 11 ರಂದು ಉಸಿರಾಟ ಸಮಸ್ಯೆಯಿಂದ ಸರಸಮ್ಮ ಎಂಬ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದರು. ಅಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಡಾಕ್ಟರ್ ಡ್ರೆಸ್ ಹಾಕಿಕೊಂಡು ವಾರ್ಡ್ ಒಳಗೆ ಬಂದ ಖತರ್ನಾಕ್ ಲೇಡಿ, ರೋಗಿಗೆ ಚಿಕಿತ್ಸೆ ನೀಡಬೇಕೆಂದು ಎಲ್ಲರಿಗೂ ಹೊರಗೆ ಹೋಗುವಂತೆ ಸೂಚಿಸಿದ್ದಾಳೆ. ಕೆಲ ಹೊತ್ತಿನ ನಂತರ ಆಕೆಯೂ ಹೊರಗೆ ಹೋಗಿದ್ದಾಳೆ.

ಇದೇ ಸಮಯಕ್ಕೆ ಒಳಗೆ ಬಂದ ಶುಶ್ರೂಷಕಿ ಆ ಡಾಕ್ಟರ್ ಯಾರು? ಅಂತಾ ಪ್ರಶ್ನೆ ಮಾಡಿದ್ದಾರೆ. ಕೊನೆಗೆ ಡಾಕ್ಟರ್ ಯಾರು ಬಂದಿಲ್ಲ ಎಂದು ತಿಳಿದು, ಆಕೆ ನಕಲಿ ಡಾಕ್ಟರ್ ಅನ್ನೋದು ಗೊತ್ತಾಗಿದೆ. ಅನುಮಾನಗೊಂಡು ಸರಸಮ್ಮರನ್ನ ಚೆಕ್ ಮಾಡಿದ ವೇಳೆ ಎರಡು ಉಂಗುರ, ಕತ್ತಿನಲ್ಲಿದ್ದ ಸರ ಸೇರಿ 41 ಗ್ರಾಂ ಚಿನ್ನಾಭರಣ ಕಳವು ಮಾಡಿರೋದು ಗೊತ್ತಾಗಿದೆ.

ನಂತರ ಪೊಲೀಸರಿಗೆ ಮಾಹಿತಿ ನೀಡಿ, ವಿಚಾರಣೆ ನಡೆಸಿದಾಗ ಆ ನಕಲಿ ಲೇಡಿ ಡಾಕ್ಟರ್ ಅಕ್ಕಪಕ್ಕದ ವಾರ್ಡ್ಗಳಲ್ಲೂ ಇದೇ ರೀತಿ ಕೃತ್ಯವೆಸಗಿರೋದು ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಅಶೋಕ ನಗರ ಪೊಲೀಸರು, ನಕಲಿ ಡಾಕ್ಟರ್ ಗಾಗಿ ಹುಡುಕಾಟ ನಡೆಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

26 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

23 hours ago