ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಏರುತ್ತಲೇ ಇದೆ ಈ ನಿಟ್ಟಿನಲ್ಲಿ ವಿದೇಶಗಳಿಂದ ಬರುವಂತ ಪ್ರತಿಯೊಬ್ಬ
ಪ್ರಯಾಣಿಕರಿಗೂ ಕಡ್ಡಾಯವಾಗಿ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗುತ್ತದೆ. ಆರ್ಟಿಪಿಸಿಆರ್ ಪರೀಕ್ಷೆ ಬಳಿಕ ಪಾಸಿಟಿವ್ ಬಂದರೆ ಅವರನ್ನು ಹೋಟೆಲ್ಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತದೆ. ಪ್ರತಿ ಪ್ರಯಾಣಿಕರನ್ನೂ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಅವರು ಮಂಗಳವಾರ ನಡೆದ ಕೋವಿಡ್ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಕ್ವಾರಂಟೈನ್ಗೆ ಒಳಪಡುವವರಿಗೆ 2 ಸ್ಟಾರ್ ಅಥವಾ 3 ಸ್ಟಾರ್ ಹೋಟೆಲ್ಗಳಲ್ಲಿ ಅವಕಾಶ ಮಾಡಲಾಗುವುದು. ನಗರದಲ್ಲಿ ಹೋಟೆಲ್ಗಳನ್ನು ಗುರುತಿಸುವಂತೆ ಈಗಾಗಲೇ ಬಿಬಿಎಂಪಿಗೆ ಸೂಚನೆ ನೀಡಲಾಗಿದೆ. ಹೋಟೆಲ್ಗಳ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ ಎಂದು ಸ್ಪಷ್ಟಪಡಿಸಿದರು.
ವಿದೇಶಿ ಪ್ರಯಾಣಿಕರ ಟ್ರ್ಯಾಕಿಂಗ್-ಟ್ರೇಸಿಂಗ್ ಬಲಪಡಿಸಲು ತೀರ್ಮಾನಿಸಲಾಗಿದೆ. ರಾಜ್ಯಕ್ಕೆ ಬರುವಂತಹ ಎಲ್ಲ ಪ್ರಯಾಣಿಕರ ಮಾಹಿತಿಯೂ ಸರ್ಕಾರದ ಬಳಿ ಲಭ್ಯ ಇರಲಿದೆ ಎಂದು ಹೇಳಿದರು. ಇನ್ನು ವಿಮಾನ ನಿಲ್ದಾಣದಲ್ಲಿ ಅನುಸರಿಸಬಹುದಾದ ಕೋವಿಡ್ ನಿಯಮಗಳ ಕುರಿತು ಪ್ರಶ್ನಿಸಿದಾಗ, ಕೇಂದ್ರ ಸರ್ಕಾರ ಈಗಾಗಲೇ ವಿಮಾನ ನಿಲ್ದಾಣಗಳಿಗೆ ಸಂಬಂಧಿಸಿದಂತೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸೋಂಕಿನ ಲಕ್ಷಣ ಕಂಡು ಬರುವ ಪ್ರತಿಯೊಬ್ಬರು ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಸುವ ಮೂಲಕ ಜಾಗೃತೆ ವಹಿಸಬೇಕಾಗಿದೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…