ಬೆಂಗಳೂರು: ಯಲಹಂಕದಲ್ಲಿ ನಡೆಯುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಕಾರಣ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಫೆಬ್ರವರಿ 5ರಿಂದ ಮೊದಲುಗೊಂಡು ಒಟ್ಟು 29 ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲಿ ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಮಾಹಿತಿ ನೀಡಿದೆ. ಏರ್ ಶೋ ಕಾರ್ಯಕ್ರಮದ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ವಿಮಾನ ಪ್ರಯಾಣಿಕರು ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳ್ಳಲಿರುವ ಸಮಯವನ್ನು ಗಮನಿಸಿಕೊಂಡು ಪ್ರಯಾಣದ ಯೋಜನೆ ರೂಪಿಸುವಂತೆ ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಸಲಹೆ ನೀಡಿದೆ.
ಬೆಂಗಳೂರು ಏರ್ಪೋರ್ಟ್ ಟ್ವೀಟ್
ವಿಮಾನ ನಿಲ್ದಾಣ ಕಾರ್ಯಾಚರಣೆ ಸ್ಥಗಿತದ ವೇಳಾಪಟ್ಟಿ
ಫೆಬ್ರವರಿ 5ರಿಂದ 15ರ ವರೆಗೆ 10 ದಿನಗಳ ಅವಧಿಯಲ್ಲಿ ವಿವಿಧ ಸಮಯಗಳಲ್ಲಿ ಏರ್ಪೋರ್ಟ್ ಕಾರ್ಯಾಚರಣೆ ಬಂದ್ ಆಗಿರಲಿದೆ. ದಿನಾಂಕಗಳು ಮತ್ತು ಏರ್ಪೋರ್ಟ್ ಕಾರ್ಯಾಚರಣೆ ಸ್ಥಗಿತವಾಗಲಿರುವ ಸಮಯದ ಮಾಹಿತಿ ಇಲ್ಲಿದೆ.
ಫೆಬ್ರವರಿ 5: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 6: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 7: ಬೆಳಿಗ್ಗೆ 09 ರಿಂದ 11 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 8: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 9: ಬೆಳಿಗ್ಗೆ 9 ರಿಂದ 11 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 10: ಬೆಳಿಗ್ಗೆ 9 ರಿಂದ 11:30 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ 3:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 11-12: ಮಧ್ಯಾಹ್ನ 12:00 ರಿಂದ 2:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 13-14: ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ ಸಂಜೆ 5:00 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 10 ರಿಂದ 14 ರವರೆಗೆ ಏರೋ ಇಂಡಿಯಾ ಏರ್ ಶೋ ನಡೆಯಲಿದ್ದು, ಇದು ವಿಶ್ವದ ಅತಿದೊಡ್ಡ ವೈಮಾನಿಕ ಪ್ರದರ್ಶನಗಳಲ್ಲಿ ಒಂದಾಗಿದೆ. ಮಿಲಿಟರಿ ಮತ್ತು ನಾಗರಿಕ ವಿಮಾನಯಾನ ತಜ್ಞರು, ಉದ್ಯಮ ವಲಯದ ಪ್ರಮುಖರು ಮತ್ತು ತಂತ್ರಜ್ಞಾನ ಉತ್ಸಾಹಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…